ಹುಬ್ಬಳ್ಳಿ: ಮಂಗಳೂರಿನಲ್ಲಿ ನಡೆದ ಘಟನೆಗೆ ಪೊಲೀಸರ ವೈಫಲ್ಯ ಕಾರಣವಲ್ಲ ಎಂದು ಗೃಹ ಸಚಿವ ರಾಮಲಿಂಗರೆಡ್ಡಿ ಹೇಳಿದರು.
ನಗರದಲ್ಲಿ ಶುಕ್ರವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ಬಿಜೆಪಿ ನಾಯಕರ ಪ್ರಚೋದನಾತ್ಮಕ ಹೇಳಿಕೆಯಿಂದ ಸಾಮರಸ್ಯ ಹಾಳಾಗುತ್ತಿದೆ ಎಂದು ಆಪಾದಿಸಿದರು.
‘ಮಂಗಳೂರಿನಲ್ಲಿ ನಡೆದ ಘಟನೆಗೆ ಪೊಲೀಸರು ಹಾಗೂ ಗುಪ್ತಚರ ಇಲಾಖೆಯ ವೈಫಲ್ಯ ಕಾರಣ ಅಲ್ಲ. ಅಲ್ಲಿರುವ ಪೊಲೀಸರು ಯಾವ ಪಕ್ಷಗಳಿಗೂ ಸೇರಿದವರಲ್ಲ. ಬಿಜೆಪಿ, ಪಿಎಫ್ಐ, ಶ್ರೀರಾಮ ಸೇನೆ, ಆರ್ಎಸ್ಎಸ್ ಸಂಘಟನೆಗಳ ವರ್ತನೆಯಿಂದ ಸಾಮರಸ್ಯ ಹಾಳಾಗುತ್ತಿದೆ’ ಎಂದು ಅವರು ಟೀಕಿಸಿದರು.