‘ಭ್ರಷ್ಟಾಚಾರ ಮುಕ್ತ ದೇಶ ನಿರ್ಮಾಣ ಮಾಡುತ್ತೇವೆ ಎಂದು ಪ್ರಧಾನಿ ಹೋದಲ್ಲೆಲ್ಲಾ ಹೇಳುತ್ತಿದ್ದಾರೆ. ದೊಡ್ಡ ದೊಡ್ಡ ಜಾಹೀರಾತುಗಳನ್ನು ಹಾಕಿಸುತ್ತಿದ್ದಾರೆ. ಜನರು ಸಂಕಲ್ಪ ಮಾಡಬೇಕು ಎನ್ನುತ್ತಾರೆ. ಆದರೆ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಜನಲೋಕಪಾಲ ಜಾರಿಗೆ ಕ್ರಮ ಕೈಗೊಂಡಿಲ್ಲ. ನೋಟು ರದ್ದತಿ ನಂತರ ದೇಶದಲ್ಲಿ ಭ್ರಷ್ಟಾಚಾರ ಕಡಿಮೆಯಾಗಿಲ್ಲ. ವಿದೇಶದಲ್ಲಿ ಇರುವ ಕಪ್ಪುಹಣ ತರುವುದಕ್ಕೂ ಆಗಿಲ್ಲ’ ಎಂದು ಆರೋಪಿಸಿದರು.