ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡ್ಲುಪೇಟೆ: ಆನೆ ಹಿಂಡು ಪ್ರತ್ಯಕ್ಷ

Last Updated 5 ಜನವರಿ 2018, 19:30 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಅಭಯಾರಣ್ಯ ವ್ಯಾಪ್ತಿಯ ಓಂಕಾರ ವಲಯದ ಅಂಚಿನ ಕುರುಬರ ಹುಂಡಿ ಗ್ರಾಮದಲ್ಲಿ ಶುಕ್ರವಾರ ಮರಿಯಾನೆ ಸೇರಿದಂತೆ ಆನೆಗಳ ಗುಂಪು ಕಾಣಿಸಿಕೊಂಡಿದೆ.

ಮಂಚಹಳ್ಳಿ ಬೆಟ್ಟದ ಕೆಳ ಭಾಗದಲ್ಲಿ 5 ಆನೆಗಳ ಗುಂಪು ಸಂಚರಿಸುತ್ತಿದೆ. ಈ ಭಾಗದಲ್ಲಿ ಪದೇ ಪದೇ ಆನೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ರೈತರು ಮತ್ತು ಕುರಿಗಾಹಿಗಳು ಕೆಲಸಕ್ಕೆ ಹೋಗಲು ಹೆದರುತ್ತಿದ್ದಾರೆ.

‘ಈ ಭಾಗದಲ್ಲಿ ಇತ್ತೀಚೆಗೆ ಆನೆ ಮರಿಯೊಂದು ತಪ್ಪಿಸಿಕೊಂಡು ಮೃತಪಟ್ಟಿತ್ತು. ಇದ್ದರಿಂದ ಆನೆಗಳ ಗುಂಪು ಈ ಭಾಗದಲ್ಲೇ ಓಡಾಡುತ್ತಿದೆ. ಅವುಗಳನ್ನು ದೂರ ಓಡಿಸಲು, ಬರುವ ಮಾರ್ಗವನ್ನು ಬಂದ್ ಮಾಡಲಾಗಿದೆ’ ಎಂದು ಓಂಕಾರ ವಲಯದ ಅರಣ್ಯಾಧಿಕಾರಿ ನವೀನ್‌ಕುಮಾರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT