‘ಕೋಮುವಾದಿ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪಿಎಫ್ಐ, ಬಜರಂಗದಳ, ಪ್ರಮೋದ್ ಮುತಾಲಿಕ್ ಅವರ ಶ್ರೀರಾಮಸೇನೆ ಯಾವುದೇ ಸಂಘಟನೆ ಇರಬಹುದು. ಒಟ್ಟಾರೆ ಧರ್ಮದ ಹೆಸರಿನಲ್ಲಿ ಕೋಮುಭಾವನೆ ಕೆರಳಿಸುವ, ಗಲಭೆ ಸೃಷ್ಟಿಸುವ ಸಂಘಟನೆಗಳ ವಿರುದ್ಧ ಉಗ್ರ ಕ್ರಮ ಜರುಗಿಸುತ್ತೇವೆ. ಸಂಘಟನೆ ನಿಷೇಧಿಸುವುದೂ ಒಂದು ಕ್ರಮ. ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ’ ಎಂದು ಪ್ರತಿಕ್ರಿಯಿಸಿದರು.