<p><strong>ಬೆಂಗಳೂರು</strong>: ‘ದೀಪಕ್ ರಾವ್ ಮೇಲೆ ಹಲ್ಲೆ ನಡೆಯುವಾಗ ಅಲ್ಲಿದ್ದ ಸ್ಥಳೀಯ ಮುಸ್ಲಿಮರು ಆತನನ್ನು ರಕ್ಷಿಸಲು ಮುಂದಾಗಿದ್ದರು, ಆದರೆ ಅಷ್ಟರಲ್ಲಿ ದೀಪಕ್ ಮೃತಪಟ್ಟಿದ್ದರು’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಬರೆದುಕೊಂಡಿದ್ದಾರೆ. ಆದರೆ ಯಾವ ಮಾಧ್ಯಮಗಳೂ ಈ ಮಾಹಿತಿಯನ್ನು ಪ್ರಕಟಿಸುತ್ತಿಲ್ಲ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಫೇಸ್ಬುಕ್ನಲ್ಲಿ ಪ್ರಕಟವಾಗಿರುವ ಅಂತಹ ಒಂದು ಬರಹ ವೈರಲ್ ಆಗಿದ್ದು, ಹಲವರು ಅದನ್ನು ಹಂಚಿಕೊಂಡಿದ್ದಾರೆ.</p>.<p>‘ಸ್ಥಳೀಯ ಮುಸ್ಲಿಮರು ಹಲ್ಲೆ ನಡೆದ ಜಾಗಕ್ಕೆ ತಲುಪುವಷ್ಟರಲ್ಲಿ ಆರೋಪಿಗಳು ತಮ್ಮ ಕಾರು ಹತ್ತಿ ಪರಾರಿಯಾದರು. ಇದರ ಮಧ್ಯೆಯೇ ಆ ಕಾರಿನ ಮಾದರಿ, ಬಣ್ಣ ಮತ್ತು ನೋಂದಣಿ ಸಂಖ್ಯೆ ಹಾಗೂ ಅದು ಹೋದ ದಿಕ್ಕಿನ ಬಗ್ಗೆ ಆ ಮುಸ್ಲಿಮರೇ ಪೊಲೀಸರಿಗೆ ಮಾಹಿತಿ ನೀಡಿದರು. ಹತ್ಯೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಲು ಇದರಿಂದ ಸಾಧ್ಯವಾಯಿತು’ ಎಂದು ಆ ಫೇಸ್ಬುಕ್ ಬರಹದಲ್ಲಿ ವಿವರಿಸಲಾಗಿದೆ.</p>.<p><strong>ಕೊಂದವರು ನಾಶವಾಗಲಿ:</strong> ‘ದೀಪಕ್ ಒಳ್ಳೆಯ ಹುಡುಗನಾಗಿದ್ದ. ಆತನ ಸಾವನ್ನು ಊಹಿಸಲು ಸಾಧ್ಯವಿಲ್ಲ. ಆತನನ್ನು ಕೊಂದವರು ನಾಶವಾಗಿ ಹೋಗಲಿ’ ಎಂದು ದೀಪಕ್ ಕೆಲಸ ಮಾಡುತ್ತಿದ್ದ ಮೊಬೈಲ್ ಅಂಗಡಿ ಮಾಲೀಕ ಅಬ್ದುಲ್ ಮಜೀದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ನಮ್ಮ ನಡುವೆ ಯಾವುದೇ ಜಾತಿ ಭೇದಬಾವ ಇರಲಿಲ್ಲ. ಪ್ರಾಮಾಣಿಕತೆಗೆ ಮತ್ತೊಂದು ಹೆಸರೇ ದೀಪಕ್, ನಮ್ಮ ನಡುವೆ ಯಾವತ್ತೂ ಧರ್ಮ, ಆಚಾರ, ವಿಚಾರ ಅಡ್ಡ ಬರಲಿಲ್ಲ. ಸಂಸ್ಕಾರ, ಸಂಸ್ಕೃತಿ ಅಡ್ಡಿಯಾಗಲಿಲ್ಲ. ಮಾನವೀಯತೆಯಿಂದ ನಾವು ಕೆಲಸ ಮಾಡುತ್ತಿದ್ದೆವು. 7 ವರ್ಷದಲ್ಲಿ ಒಂದು ದಿನವೂ ನಾನು ಮುಸ್ಲಿಂ, ನೀನು ಹಿಂದೂ ಎಂದೂ ಭೇದ ಮಾಡಿರಲಿಲ್ಲ’ ಎಂದು ಸ್ಥಳೀಯ ಸುದ್ದಿ ವಾಹಿನಿಗಳಿಗೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ದೀಪಕ್ ರಾವ್ ಮೇಲೆ ಹಲ್ಲೆ ನಡೆಯುವಾಗ ಅಲ್ಲಿದ್ದ ಸ್ಥಳೀಯ ಮುಸ್ಲಿಮರು ಆತನನ್ನು ರಕ್ಷಿಸಲು ಮುಂದಾಗಿದ್ದರು, ಆದರೆ ಅಷ್ಟರಲ್ಲಿ ದೀಪಕ್ ಮೃತಪಟ್ಟಿದ್ದರು’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಬರೆದುಕೊಂಡಿದ್ದಾರೆ. ಆದರೆ ಯಾವ ಮಾಧ್ಯಮಗಳೂ ಈ ಮಾಹಿತಿಯನ್ನು ಪ್ರಕಟಿಸುತ್ತಿಲ್ಲ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಫೇಸ್ಬುಕ್ನಲ್ಲಿ ಪ್ರಕಟವಾಗಿರುವ ಅಂತಹ ಒಂದು ಬರಹ ವೈರಲ್ ಆಗಿದ್ದು, ಹಲವರು ಅದನ್ನು ಹಂಚಿಕೊಂಡಿದ್ದಾರೆ.</p>.<p>‘ಸ್ಥಳೀಯ ಮುಸ್ಲಿಮರು ಹಲ್ಲೆ ನಡೆದ ಜಾಗಕ್ಕೆ ತಲುಪುವಷ್ಟರಲ್ಲಿ ಆರೋಪಿಗಳು ತಮ್ಮ ಕಾರು ಹತ್ತಿ ಪರಾರಿಯಾದರು. ಇದರ ಮಧ್ಯೆಯೇ ಆ ಕಾರಿನ ಮಾದರಿ, ಬಣ್ಣ ಮತ್ತು ನೋಂದಣಿ ಸಂಖ್ಯೆ ಹಾಗೂ ಅದು ಹೋದ ದಿಕ್ಕಿನ ಬಗ್ಗೆ ಆ ಮುಸ್ಲಿಮರೇ ಪೊಲೀಸರಿಗೆ ಮಾಹಿತಿ ನೀಡಿದರು. ಹತ್ಯೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಲು ಇದರಿಂದ ಸಾಧ್ಯವಾಯಿತು’ ಎಂದು ಆ ಫೇಸ್ಬುಕ್ ಬರಹದಲ್ಲಿ ವಿವರಿಸಲಾಗಿದೆ.</p>.<p><strong>ಕೊಂದವರು ನಾಶವಾಗಲಿ:</strong> ‘ದೀಪಕ್ ಒಳ್ಳೆಯ ಹುಡುಗನಾಗಿದ್ದ. ಆತನ ಸಾವನ್ನು ಊಹಿಸಲು ಸಾಧ್ಯವಿಲ್ಲ. ಆತನನ್ನು ಕೊಂದವರು ನಾಶವಾಗಿ ಹೋಗಲಿ’ ಎಂದು ದೀಪಕ್ ಕೆಲಸ ಮಾಡುತ್ತಿದ್ದ ಮೊಬೈಲ್ ಅಂಗಡಿ ಮಾಲೀಕ ಅಬ್ದುಲ್ ಮಜೀದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ನಮ್ಮ ನಡುವೆ ಯಾವುದೇ ಜಾತಿ ಭೇದಬಾವ ಇರಲಿಲ್ಲ. ಪ್ರಾಮಾಣಿಕತೆಗೆ ಮತ್ತೊಂದು ಹೆಸರೇ ದೀಪಕ್, ನಮ್ಮ ನಡುವೆ ಯಾವತ್ತೂ ಧರ್ಮ, ಆಚಾರ, ವಿಚಾರ ಅಡ್ಡ ಬರಲಿಲ್ಲ. ಸಂಸ್ಕಾರ, ಸಂಸ್ಕೃತಿ ಅಡ್ಡಿಯಾಗಲಿಲ್ಲ. ಮಾನವೀಯತೆಯಿಂದ ನಾವು ಕೆಲಸ ಮಾಡುತ್ತಿದ್ದೆವು. 7 ವರ್ಷದಲ್ಲಿ ಒಂದು ದಿನವೂ ನಾನು ಮುಸ್ಲಿಂ, ನೀನು ಹಿಂದೂ ಎಂದೂ ಭೇದ ಮಾಡಿರಲಿಲ್ಲ’ ಎಂದು ಸ್ಥಳೀಯ ಸುದ್ದಿ ವಾಹಿನಿಗಳಿಗೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>