‘ಭಾರತೀಯ ಷೇರು ನಿಯಂತ್ರಣ ಮಂಡಳಿಯು (ಸೆಬಿ), ಚಿಟ್ಫಂಡ್ ಹಗರಣಗಳನ್ನು ಪರಿಶೀಲಿಸುತ್ತಿದೆ. ಇಂತಹ ವಂಚಕ ಕಂಪನಿಗಳ ಆಸ್ತಿ ವಶಪಡಿಸಿಕೊಂಡು ಅವುಗಳನ್ನು ಮಾರಾಟ ಮಾಡಿ ಬರುವ ಹಣವನ್ನು ಹೂಡಿಕೆದಾರರಿಗೆ ಮರಳಿಸಲು ಕ್ರಮ ಕೈಗೊಳ್ಳಲಾಗುವುದು. ಹೂಡಿಕೆದಾರರ ಹಿತಾಸಕ್ತಿ ರಕ್ಷಿಸಲು ಕಠಿಣ ಕಾಯ್ದೆ ರೂಪಿಸಲಾಗುತ್ತಿದೆ’ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಹೇಳಿದ್ದಾರೆ.