<p><strong>ಪಟ್ನಾ: </strong>ಮೇವು ಹಗರಣದ ತಪ್ಪಿತಸ್ಥರ ವಿಚಾರಣೆಯನ್ನು ಶುಕ್ರವಾರ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶಿವಪಾಲ್ ಸಿಂಗ್, ಶಿಕ್ಷೆ ಪ್ರಮಾಣ ಪ್ರಕಟಿಸುವುದನ್ನು ಮುಂದೂಡಿದ್ದಾರೆ. ಶನಿವಾರ ಶಿಕ್ಷೆ ಪ್ರಮಾಣ ಪ್ರಕಟವಾಗುವ ಸಾಧ್ಯತೆ ಇದೆ.</p>.<p>ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಪರ ವಕೀಲರ ವಾದ ಆಲಿಸಿದರು. ಆದರೆ, ಲಾಲು ಅವರ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಲಿಲ್ಲ. ಶುಕ್ರವಾರ ಐವರು ತಪ್ಪಿತಸ್ಥರ ವಿಚಾರಣೆ ಪೂರ್ಣಗೊಳಿಸಿದರು.</p>.<p>ಗುರುವಾರ ಐವರ ವಿಚಾರಣೆ ಪೂರ್ಣಗೊಂಡಿತ್ತು. ಒಟ್ಟು 16 ತಪ್ಪಿತಸ್ಥರ ಪೈಕಿ ಇನ್ನೂ ಆರು ಮಂದಿಯ ವಿಚಾರಣೆ ಬಾಕಿ ಇದ್ದು, ಶನಿವಾರ ಪೂರ್ಣಗೊಳಿಸುವುದಾಗಿ ನ್ಯಾಯಾಧೀಶರು ತಿಳಿಸಿದರು.</p>.<p>‘2014ರಲ್ಲಿ ಲಾಲು ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮೇವು ಹಗರಣಕ್ಕೆ ಸಂಬಂಧಿಸಿದಂತೆ 21 ವರ್ಷಗಳಿಂದ ವಿಚಾರಣೆ ಎದುರಿಸುತ್ತಿದ್ದಾರೆ. ಹಲವು ಬಾರಿ ಜೈಲಿನಲ್ಲಿದ್ದರು. ಹಾಗಾಗಿ ಅವರ ಬಗ್ಗೆ ಔದಾರ್ಯ ತೋರಿ, ಕಡಿಮೆ ಶಿಕ್ಷೆ ವಿಧಿಸಬೇಕು’ ಎಂದು ಲಾಲು ಪರ ವಕೀಲರು ಕೋರಿದರು.</p>.<p>ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿಬಿಐ ವಕೀಲರು, ಲಾಲು ಪ್ರಸಾದ್ ಅವರ ಆರೋಗ್ಯ ಉತ್ತಮವಾಗಿದ್ದು, ಈಚೆಗೆ ರಾಜಕೀಯ ರ್ಯಾಲಿಗಳಲ್ಲಿ ಭಾಗವಹಿಸಿದ್ದರು. ಅವರಿಗೆ ಗರಿಷ್ಠ ಶಿಕ್ಷೆ ವಿಧಿಸುವಂತೆ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ: </strong>ಮೇವು ಹಗರಣದ ತಪ್ಪಿತಸ್ಥರ ವಿಚಾರಣೆಯನ್ನು ಶುಕ್ರವಾರ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶಿವಪಾಲ್ ಸಿಂಗ್, ಶಿಕ್ಷೆ ಪ್ರಮಾಣ ಪ್ರಕಟಿಸುವುದನ್ನು ಮುಂದೂಡಿದ್ದಾರೆ. ಶನಿವಾರ ಶಿಕ್ಷೆ ಪ್ರಮಾಣ ಪ್ರಕಟವಾಗುವ ಸಾಧ್ಯತೆ ಇದೆ.</p>.<p>ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಪರ ವಕೀಲರ ವಾದ ಆಲಿಸಿದರು. ಆದರೆ, ಲಾಲು ಅವರ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಲಿಲ್ಲ. ಶುಕ್ರವಾರ ಐವರು ತಪ್ಪಿತಸ್ಥರ ವಿಚಾರಣೆ ಪೂರ್ಣಗೊಳಿಸಿದರು.</p>.<p>ಗುರುವಾರ ಐವರ ವಿಚಾರಣೆ ಪೂರ್ಣಗೊಂಡಿತ್ತು. ಒಟ್ಟು 16 ತಪ್ಪಿತಸ್ಥರ ಪೈಕಿ ಇನ್ನೂ ಆರು ಮಂದಿಯ ವಿಚಾರಣೆ ಬಾಕಿ ಇದ್ದು, ಶನಿವಾರ ಪೂರ್ಣಗೊಳಿಸುವುದಾಗಿ ನ್ಯಾಯಾಧೀಶರು ತಿಳಿಸಿದರು.</p>.<p>‘2014ರಲ್ಲಿ ಲಾಲು ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮೇವು ಹಗರಣಕ್ಕೆ ಸಂಬಂಧಿಸಿದಂತೆ 21 ವರ್ಷಗಳಿಂದ ವಿಚಾರಣೆ ಎದುರಿಸುತ್ತಿದ್ದಾರೆ. ಹಲವು ಬಾರಿ ಜೈಲಿನಲ್ಲಿದ್ದರು. ಹಾಗಾಗಿ ಅವರ ಬಗ್ಗೆ ಔದಾರ್ಯ ತೋರಿ, ಕಡಿಮೆ ಶಿಕ್ಷೆ ವಿಧಿಸಬೇಕು’ ಎಂದು ಲಾಲು ಪರ ವಕೀಲರು ಕೋರಿದರು.</p>.<p>ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿಬಿಐ ವಕೀಲರು, ಲಾಲು ಪ್ರಸಾದ್ ಅವರ ಆರೋಗ್ಯ ಉತ್ತಮವಾಗಿದ್ದು, ಈಚೆಗೆ ರಾಜಕೀಯ ರ್ಯಾಲಿಗಳಲ್ಲಿ ಭಾಗವಹಿಸಿದ್ದರು. ಅವರಿಗೆ ಗರಿಷ್ಠ ಶಿಕ್ಷೆ ವಿಧಿಸುವಂತೆ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>