<p><strong>ಬಳ್ಳಾರಿ:</strong> ‘ಬಿಜೆಪಿ ಮತ್ತು ಪಿಎಫ್ಐ ಜೊತೆ ಗುಪ್ತ ಸಂಬಂಧ ಏರ್ಪಟ್ಟಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. 24 ಗಂಟೆಯೊಳಗೆ ಅವರು ಅದನ್ನು ಸಾಬೀತು ಮಾಡಲಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದರು.</p>.<p>ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ಮೂವರು ಮುಖಂಡರ ಕೈವಾಡವಿದೆ ಎಂಬುದೂ ಸುಳ್ಳು ಎಂದು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಕೊಲೆ ಪ್ರಕರಣಕ್ಕೆ ರಾಜ್ಯ ಸರ್ಕಾರ ನ್ಯಾಯ ದೊರಕಿಸುವುದಿಲ್ಲವೆಂದೇ ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಬೇಕೆಂದು ರಾಜ್ಯದ ಸಂಸದರು ಕೇಂದ್ರವನ್ನು ಆಗ್ರಹಿಸಿದ್ದಾರೆ ಎಂದರು.</p>.<p>*<br /> <strong>‘ನವಾಝ್ ಬಿಜೆಪಿ ಕಾರ್ಯಕರ್ತನಲ್ಲ’<br /> ಮಂಗಳೂರು: </strong>ದೀಪಕ್ ಹತ್ಯೆ ಪ್ರಕರಣ ಪ್ರಮುಖ ಆರೋಪಿ ಪಿಂಕಿ ನವಾಝ್ ಬಿಜೆಪಿ ಕಾರ್ಯಕರ್ತನಲ್ಲ. ಅವನಿಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಬಿಜೆಪಿ ಮುಖಂಡರು ಸ್ಪಷ್ಟಪಡಿಸಿದ್ದಾರೆ.</p>.<p>ಗುರುವಾರ ಪತ್ರಿಕಾಗೋಷ್ಠಿ ನಡೆಸಿದ್ದ ಶಾಸಕ ಬಾವ ಹಾಗೂ ಎಸ್ಡಿಪಿಐ ಮುಖಂಡರು, ಆರೋಪಿ ಪಿಂಕಿ ನವಾಝ್ ಬಿಜೆಪಿ ಕಾರ್ಯಕರ್ತನಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಿದ್ದ ಎಂದು ಆರೋಪಿಸಿದ್ದರು. ಈ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿತ್ತು.</p>.<p>ಇದಕ್ಕೆ ಶುಕ್ರವಾರ ಸ್ಪಷ್ಟನೆ ನೀಡಿದ, ಬಿಜೆಪಿ ಹಿಂದುಳಿದ ಮೋರ್ಚಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸತ್ಯಜಿತ್ ಸುರತ್ಕಲ್, ಬಿಜೆಪಿ ಅಲ್ಪ<br /> ಸಂಖ್ಯಾತ ಮೋರ್ಚಾ ಉತ್ತರ ಘಟಕದ ಅಧ್ಯಕ್ಷ ಶಹಾನವಾಝ್, ‘ಪಿಂಕಿ ನವಾಝ್ ನಮ್ಮ ಪಕ್ಷದ ಕಾರ್ಯಕರ್ತನಲ್ಲ. ಶಾಸಕ ಬಾವ ಅವರ ಆರೋಪ ನಿರಾಧಾರ. ಈ ಆರೋಪವನ್ನು ಸಾಬೀತುಪಡಿಸಬೇಕು. ಇಲ್ಲದೇ ಇದ್ದರೆ, ಶಾಸಕರ ಮನೆ ಎದುರು ಧರಣಿ ನಡೆಸಲಾಗುವುದು' ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ‘ಬಿಜೆಪಿ ಮತ್ತು ಪಿಎಫ್ಐ ಜೊತೆ ಗುಪ್ತ ಸಂಬಂಧ ಏರ್ಪಟ್ಟಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. 24 ಗಂಟೆಯೊಳಗೆ ಅವರು ಅದನ್ನು ಸಾಬೀತು ಮಾಡಲಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದರು.</p>.<p>ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ಮೂವರು ಮುಖಂಡರ ಕೈವಾಡವಿದೆ ಎಂಬುದೂ ಸುಳ್ಳು ಎಂದು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಕೊಲೆ ಪ್ರಕರಣಕ್ಕೆ ರಾಜ್ಯ ಸರ್ಕಾರ ನ್ಯಾಯ ದೊರಕಿಸುವುದಿಲ್ಲವೆಂದೇ ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಬೇಕೆಂದು ರಾಜ್ಯದ ಸಂಸದರು ಕೇಂದ್ರವನ್ನು ಆಗ್ರಹಿಸಿದ್ದಾರೆ ಎಂದರು.</p>.<p>*<br /> <strong>‘ನವಾಝ್ ಬಿಜೆಪಿ ಕಾರ್ಯಕರ್ತನಲ್ಲ’<br /> ಮಂಗಳೂರು: </strong>ದೀಪಕ್ ಹತ್ಯೆ ಪ್ರಕರಣ ಪ್ರಮುಖ ಆರೋಪಿ ಪಿಂಕಿ ನವಾಝ್ ಬಿಜೆಪಿ ಕಾರ್ಯಕರ್ತನಲ್ಲ. ಅವನಿಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಬಿಜೆಪಿ ಮುಖಂಡರು ಸ್ಪಷ್ಟಪಡಿಸಿದ್ದಾರೆ.</p>.<p>ಗುರುವಾರ ಪತ್ರಿಕಾಗೋಷ್ಠಿ ನಡೆಸಿದ್ದ ಶಾಸಕ ಬಾವ ಹಾಗೂ ಎಸ್ಡಿಪಿಐ ಮುಖಂಡರು, ಆರೋಪಿ ಪಿಂಕಿ ನವಾಝ್ ಬಿಜೆಪಿ ಕಾರ್ಯಕರ್ತನಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಿದ್ದ ಎಂದು ಆರೋಪಿಸಿದ್ದರು. ಈ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿತ್ತು.</p>.<p>ಇದಕ್ಕೆ ಶುಕ್ರವಾರ ಸ್ಪಷ್ಟನೆ ನೀಡಿದ, ಬಿಜೆಪಿ ಹಿಂದುಳಿದ ಮೋರ್ಚಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸತ್ಯಜಿತ್ ಸುರತ್ಕಲ್, ಬಿಜೆಪಿ ಅಲ್ಪ<br /> ಸಂಖ್ಯಾತ ಮೋರ್ಚಾ ಉತ್ತರ ಘಟಕದ ಅಧ್ಯಕ್ಷ ಶಹಾನವಾಝ್, ‘ಪಿಂಕಿ ನವಾಝ್ ನಮ್ಮ ಪಕ್ಷದ ಕಾರ್ಯಕರ್ತನಲ್ಲ. ಶಾಸಕ ಬಾವ ಅವರ ಆರೋಪ ನಿರಾಧಾರ. ಈ ಆರೋಪವನ್ನು ಸಾಬೀತುಪಡಿಸಬೇಕು. ಇಲ್ಲದೇ ಇದ್ದರೆ, ಶಾಸಕರ ಮನೆ ಎದುರು ಧರಣಿ ನಡೆಸಲಾಗುವುದು' ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>