ಇದಕ್ಕೆ ಶುಕ್ರವಾರ ಸ್ಪಷ್ಟನೆ ನೀಡಿದ, ಬಿಜೆಪಿ ಹಿಂದುಳಿದ ಮೋರ್ಚಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸತ್ಯಜಿತ್ ಸುರತ್ಕಲ್, ಬಿಜೆಪಿ ಅಲ್ಪ
ಸಂಖ್ಯಾತ ಮೋರ್ಚಾ ಉತ್ತರ ಘಟಕದ ಅಧ್ಯಕ್ಷ ಶಹಾನವಾಝ್, ‘ಪಿಂಕಿ ನವಾಝ್ ನಮ್ಮ ಪಕ್ಷದ ಕಾರ್ಯಕರ್ತನಲ್ಲ. ಶಾಸಕ ಬಾವ ಅವರ ಆರೋಪ ನಿರಾಧಾರ. ಈ ಆರೋಪವನ್ನು ಸಾಬೀತುಪಡಿಸಬೇಕು. ಇಲ್ಲದೇ ಇದ್ದರೆ, ಶಾಸಕರ ಮನೆ ಎದುರು ಧರಣಿ ನಡೆಸಲಾಗುವುದು' ಎಂದು ಎಚ್ಚರಿಸಿದರು.