ಪತ್ರಕರ್ತ ಹಿಂದೂಧರ ಹೊನ್ನಾಪುರ, ‘ಅಂಬೇಡ್ಕರ್ ಹೆಸರಿನಲ್ಲಿದ್ದ ಸಂಶೋಧನಾ ಕೇಂದ್ರಗಳನ್ನು ಕೇಂದ್ರ ಸರ್ಕಾರ ಮುಚ್ಚುತ್ತಿದೆ. ಅವರ ಪ್ರತಿಮೆಗಳನ್ನು ಸ್ಥಾಪಿಸುವ ಮೂಲಕ ನಮ್ಮ ಕಣ್ಣಿಗೆ ಮಣ್ಣೆರಚುತ್ತಿದೆ. ನಮ್ಮ ಅಸ್ತಿತ್ವದ ಉಳಿವಿಗಾಗಿ ಹೋರಾಟ ಮಾಡಬೇಕಿದೆ. ಕೋರೆಗಾಂವ್ ವಿಜಯೋತ್ಸವದ ಗಲಭೆ ನಮ್ಮ ರಾಜಕೀಯ ಮುನ್ನೋಟ ಬದಲಾಯಿಸುವ ದೊಡ್ಡ ಉದಾಹರಣೆಯಾಗಬೇಕು’ ಎಂದು ತಿಳಿಸಿದರು.