<p><strong>ಬೆಂಗಳೂರು: </strong>ದಲಿತ ಸಮುದಾಯದ ನೌಕರರು ಹಾಗೂ ವಿದ್ಯಾವಂತರು ಪುರೋಹಿತಶಾಹಿಗಳ ಮಾನಸಿಕ ಗುಲಾಮರಾಗಿದ್ದಾರೆ ಎಂದು ಕವಿ ಡಾ. ಸಿದ್ಧಲಿಂಗಯ್ಯ ವಿಷಾದ ವ್ಯಕ್ತಪಡಿಸಿದರು.</p>.<p>ವಿಶಾಖ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ನಿವೃತ್ತ ಸರ್ಕಾರಿ ನೌಕರ ವಿ.ಬಸವರಾಜ್ ಅವರಿಗೆ ಅಭಿನಂದನೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ದಲಿತ ಸಮಾಜದ ನೌಕರರಲ್ಲಿ ಕೀಳರಿಮೆ ಇದೆ. ತಾವು ಕೆಳಜಾತಿಯವರು, ಮೂಢರು ಎಂದು ತಿಳಿದುಕೊಂಡಿದ್ದಾರೆ. ಪುರೋಹಿತರ ಬಳಿ ಜಾತಕ ಕೇಳುವುದು, ಸತ್ಯನಾರಾಯಣ ಪೂಜೆ ಮಾಡಿಸುವುದು, ನಾಮಕರಣ ಹಾಗೂ ಗೃಹಪ್ರವೇಶಕ್ಕೆ ಪುರೋಹಿತರನ್ನು ಕರೆಯುತ್ತಾರೆ. ಈ ಮಾನಸಿಕ ದಾರ್ಷ್ಟ್ಯ ಹಾಗೂ ಮೌಢ್ಯದಿಂದ ಹೊರಬರಬೇಕು ಎಂದು ಹೇಳಿದರು.</p>.<p>ವಿಶ್ರಾಂತ ಕುಲಪತಿ ಪ್ರೊ. ಎಂ.ಜಿ.ಕೃಷ್ಣನ್, ‘ಕ್ರಿಯಾಶೀಲ ಹಾಗೂ ಸೃಜನಶೀಲ ವ್ಯಕ್ತಿಗೆ ನಿವೃತ್ತಿ ಇರುವುದಿಲ್ಲ. ನಿವೃತ್ತಿಯ ನಂತರವೂ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ. ವಿ.ಬಸವರಾಜ್ ಅವರು ದಲಿತ ಚಳವಳಿಯಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಲಿ’ ಎಂದು ಹಾರೈಸಿದರು.</p>.<p>ವಿ.ಬಸವರಾಜ್, ‘ಸರ್ಕಾರಿ ಕೆಲಸಕ್ಕೆ ಆಕಸ್ಮಿಕವಾಗಿ ಸೇರಿದೆ. ನೌಕರಿ ಜತೆಗೆ ದಲಿತ ಚಳವಳಿಯಲ್ಲಿ ತೊಡಗಿಸಿಕೊಂಡೆ. ಈ ಸಂದರ್ಭದಲ್ಲಿ ಸಾಕಷ್ಟು ಸವಾಲುಗಳನ್ನು ಎದುರಿಸಿದ್ದೇನೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಕ್ರಿಯವಾಗಿ ಪಾಲ್ಗೊಳ್ಳುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ದಲಿತ ಸಮುದಾಯದ ನೌಕರರು ಹಾಗೂ ವಿದ್ಯಾವಂತರು ಪುರೋಹಿತಶಾಹಿಗಳ ಮಾನಸಿಕ ಗುಲಾಮರಾಗಿದ್ದಾರೆ ಎಂದು ಕವಿ ಡಾ. ಸಿದ್ಧಲಿಂಗಯ್ಯ ವಿಷಾದ ವ್ಯಕ್ತಪಡಿಸಿದರು.</p>.<p>ವಿಶಾಖ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ನಿವೃತ್ತ ಸರ್ಕಾರಿ ನೌಕರ ವಿ.ಬಸವರಾಜ್ ಅವರಿಗೆ ಅಭಿನಂದನೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ದಲಿತ ಸಮಾಜದ ನೌಕರರಲ್ಲಿ ಕೀಳರಿಮೆ ಇದೆ. ತಾವು ಕೆಳಜಾತಿಯವರು, ಮೂಢರು ಎಂದು ತಿಳಿದುಕೊಂಡಿದ್ದಾರೆ. ಪುರೋಹಿತರ ಬಳಿ ಜಾತಕ ಕೇಳುವುದು, ಸತ್ಯನಾರಾಯಣ ಪೂಜೆ ಮಾಡಿಸುವುದು, ನಾಮಕರಣ ಹಾಗೂ ಗೃಹಪ್ರವೇಶಕ್ಕೆ ಪುರೋಹಿತರನ್ನು ಕರೆಯುತ್ತಾರೆ. ಈ ಮಾನಸಿಕ ದಾರ್ಷ್ಟ್ಯ ಹಾಗೂ ಮೌಢ್ಯದಿಂದ ಹೊರಬರಬೇಕು ಎಂದು ಹೇಳಿದರು.</p>.<p>ವಿಶ್ರಾಂತ ಕುಲಪತಿ ಪ್ರೊ. ಎಂ.ಜಿ.ಕೃಷ್ಣನ್, ‘ಕ್ರಿಯಾಶೀಲ ಹಾಗೂ ಸೃಜನಶೀಲ ವ್ಯಕ್ತಿಗೆ ನಿವೃತ್ತಿ ಇರುವುದಿಲ್ಲ. ನಿವೃತ್ತಿಯ ನಂತರವೂ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ. ವಿ.ಬಸವರಾಜ್ ಅವರು ದಲಿತ ಚಳವಳಿಯಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಲಿ’ ಎಂದು ಹಾರೈಸಿದರು.</p>.<p>ವಿ.ಬಸವರಾಜ್, ‘ಸರ್ಕಾರಿ ಕೆಲಸಕ್ಕೆ ಆಕಸ್ಮಿಕವಾಗಿ ಸೇರಿದೆ. ನೌಕರಿ ಜತೆಗೆ ದಲಿತ ಚಳವಳಿಯಲ್ಲಿ ತೊಡಗಿಸಿಕೊಂಡೆ. ಈ ಸಂದರ್ಭದಲ್ಲಿ ಸಾಕಷ್ಟು ಸವಾಲುಗಳನ್ನು ಎದುರಿಸಿದ್ದೇನೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಕ್ರಿಯವಾಗಿ ಪಾಲ್ಗೊಳ್ಳುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>