‘ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್ಸಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಖರೋಲ, ಸದ್ಯ ಏರ್ ಇಂಡಿಯಾ ಮುಖ್ಯಸ್ಥರಾಗಿದ್ದಾರೆ. ರಾಜ್ಯ ಸೇವೆಯಿಂದ ಕೇಂದ್ರ ಸರ್ಕಾರದ ಸೇವೆಗೆ ಹೋಗುವ ಅಧಿಕಾರಿಯ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆ ಇರಬಾರದೆಂಬ ನಿಯಮವಿದೆ. ಆದರೆ, ಖರೋಲ ಅವರ ಮೇಲೆ 4ನೇ ಎಸಿಎಂಎಂ ನ್ಯಾಯಾಲಯದಲ್ಲಿ ಪ್ರಕರಣವಿದೆ (ಸಂಖ್ಯೆ 151/17). ಅಷ್ಟಾದರೂ ಅವರು ಕೇಂದ್ರ ಸೇವೆಗೆ ಹೋಗಿದ್ದಾರೆ’ ಎಂದು ದಿನೇಶ್ ದೂರಿದ್ದಾರೆ.