ಸಮಾವೇಶಕ್ಕೆ ಗಣ್ಯರ ದಂಡು: ಇದು ಸರ್ಕಾರಿ ಕಾರ್ಯಕ್ರಮವಾದ ಕಾರಣ ಜಿಲ್ಲೆಗೆ ಗಣ್ಯರ ದಂಡೇ ಬರುತ್ತಿದೆ. ಸಚಿವರಾದ ಟಿ.ಬಿ.ಜಯಚಂದ್ರ, ಆರ್.ವಿ. ದೇಶಪಾಂಡೆ, ಪ್ರಿಯಾಂಕ ಖರ್ಗೆ, ಬಸವರಾಜ ರಾಯರಡ್ಡಿ, ಎಚ್.ಕೆ.ಪಾಟೀಲ್, ತನ್ವೀರ್ ಸೇಟ್, ರಾಮಲಿಂಗಾ ರೆಡ್ಡಿ, ಎಚ್.ಸಿ.ಮಹಾದೇವಪ್ಪ, ಎಚ್. ಆಂಜನೇಯ, ಆರ್. ರೋಷನ್ ಬೇಗ್, ಎಂ.ಬಿ. ಪಾಟೀಲ, ಎಂ. ಕೃಷ್ಣಪ್ಪ, ಶರಣ ಪ್ರಕಾಶ್ ಪಾಟೀಲ್ ಭಾಗವಹಿಸುತ್ತಿದ್ದಾರೆ.