<p><strong>ಶಿರಸಿ:</strong> ಸುಗಮ ಸಂಗೀತ ಪರಿಷತ್ನ ರಾಜ್ಯಮಟ್ಟದ 15ನೇ ಸಮ್ಮೇಳನದ 'ಕಾವ್ಯ ದಿಬ್ಬಣ' ಮೆರವಣಿಗೆಗೆ ನಗರಸಭೆ ಅಧ್ಯಕ್ಷ ಪ್ರದೀಪ ಶೆಟ್ಟಿ ಶನಿವಾರ ಚಾಲನೆ ನೀಡಿದರು.</p>.<p>ಮಾರಿಕಾಂಬಾ ದೇವಾಲಯದ ಎದುರು ನೂರಾರು ಕಲಾವಿದರ ಸಮ್ಮುಖದಲ್ಲಿ ಕಾವ್ಯ ದಿಬ್ಬಣಕ್ಕೆ ಚಾಲನೆ ನೀಡಲಾಯಿತು.</p>.<p>ಈ ವೇಳೆ ನಾಡಿನ ಸಂಸ್ಕೃತಿ ಬಿಂಬಿಸುವ ಡೊಳ್ಳು ಕುಣಿತ, ಯಕ್ಷಗಾನ, ಕುಚಿಪುಡಿ ನೃತ್ಯಗಳು ಗಮನ ಸೆಳೆದವು.</p>.<p>ಹಿಂದೂಸ್ತಾನಿ ಗಾಯಕ ಹಾಸಣಗಿ ಗಣಪತಿ ಭಟ್ಟ, ಸುಗಮ ಸಂಗೀತ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಕಿಕ್ಕೇರಿ ಕೃಷ್ಣಮೂರ್ತಿ, ಸಮ್ಮೇಳನದ ಅಧ್ಯಕ್ಷೆ ಎಂ.ಕೆ.ಜಯಶ್ರೀ, ಎಚ್.ಎಸ್.ವೆಂಕಟೇಶಮೂರ್ತಿ ಮೆರವಣಿಗೆಯಲ್ಲಿ ಇದ್ದರು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು.</p>.<p>ಸುಗಮ ಸಂಗೀತ ಸಮ್ಮೇಳನದಲ್ಲಿ ಸಹಸ್ರಕಂಠಗಳಿಂದ ನಾಡಗೀತೆ ಗಾಯನ ನಡೆಯಿತು. ಲಯನ್ಸ್ ಶಾಲೆ, ಮಂಚಿಕೇರಿ ರಾಜರಾಜೇಶ್ವರಿ ಶಾಲೆ, ಎಂಇಎಸ್ ಶಾಲೆ, ಮಾರಿಕಾಂಬಾ ಪ್ರೌಢಶಾಲೆ, ಉಂಚಳ್ಳಿ, ಯಡಳ್ಳಿ, ಓಣಿಕೇರಿ ಶಾಲೆಯ 1000 ವಿದ್ಯಾರ್ಥಿಗಳು ಭಾಗಿಯಾದರು. ಗಾಯಕಿ ಬಿ.ಕೆ. ಸುಮಿತ್ರಾ, ಬಿ.ವಿ.ಶ್ರೀನಿವಾಸ ಅವರಿಂದ ಈ ಮಕ್ಕಳು ತರಬೇತಿ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಸುಗಮ ಸಂಗೀತ ಪರಿಷತ್ನ ರಾಜ್ಯಮಟ್ಟದ 15ನೇ ಸಮ್ಮೇಳನದ 'ಕಾವ್ಯ ದಿಬ್ಬಣ' ಮೆರವಣಿಗೆಗೆ ನಗರಸಭೆ ಅಧ್ಯಕ್ಷ ಪ್ರದೀಪ ಶೆಟ್ಟಿ ಶನಿವಾರ ಚಾಲನೆ ನೀಡಿದರು.</p>.<p>ಮಾರಿಕಾಂಬಾ ದೇವಾಲಯದ ಎದುರು ನೂರಾರು ಕಲಾವಿದರ ಸಮ್ಮುಖದಲ್ಲಿ ಕಾವ್ಯ ದಿಬ್ಬಣಕ್ಕೆ ಚಾಲನೆ ನೀಡಲಾಯಿತು.</p>.<p>ಈ ವೇಳೆ ನಾಡಿನ ಸಂಸ್ಕೃತಿ ಬಿಂಬಿಸುವ ಡೊಳ್ಳು ಕುಣಿತ, ಯಕ್ಷಗಾನ, ಕುಚಿಪುಡಿ ನೃತ್ಯಗಳು ಗಮನ ಸೆಳೆದವು.</p>.<p>ಹಿಂದೂಸ್ತಾನಿ ಗಾಯಕ ಹಾಸಣಗಿ ಗಣಪತಿ ಭಟ್ಟ, ಸುಗಮ ಸಂಗೀತ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಕಿಕ್ಕೇರಿ ಕೃಷ್ಣಮೂರ್ತಿ, ಸಮ್ಮೇಳನದ ಅಧ್ಯಕ್ಷೆ ಎಂ.ಕೆ.ಜಯಶ್ರೀ, ಎಚ್.ಎಸ್.ವೆಂಕಟೇಶಮೂರ್ತಿ ಮೆರವಣಿಗೆಯಲ್ಲಿ ಇದ್ದರು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು.</p>.<p>ಸುಗಮ ಸಂಗೀತ ಸಮ್ಮೇಳನದಲ್ಲಿ ಸಹಸ್ರಕಂಠಗಳಿಂದ ನಾಡಗೀತೆ ಗಾಯನ ನಡೆಯಿತು. ಲಯನ್ಸ್ ಶಾಲೆ, ಮಂಚಿಕೇರಿ ರಾಜರಾಜೇಶ್ವರಿ ಶಾಲೆ, ಎಂಇಎಸ್ ಶಾಲೆ, ಮಾರಿಕಾಂಬಾ ಪ್ರೌಢಶಾಲೆ, ಉಂಚಳ್ಳಿ, ಯಡಳ್ಳಿ, ಓಣಿಕೇರಿ ಶಾಲೆಯ 1000 ವಿದ್ಯಾರ್ಥಿಗಳು ಭಾಗಿಯಾದರು. ಗಾಯಕಿ ಬಿ.ಕೆ. ಸುಮಿತ್ರಾ, ಬಿ.ವಿ.ಶ್ರೀನಿವಾಸ ಅವರಿಂದ ಈ ಮಕ್ಕಳು ತರಬೇತಿ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>