ಮಂಗಳೂರು: ದೀಪಕ್ ರಾವ್ ಹತ್ಯೆ ನಡೆದ ಬುಧವಾರ ರಾತ್ರಿ ಕೊಟ್ಟಾರ ಚೌಕಿ ಬಳಿ ಬಶೀರ್ ಹಲ್ಲೆಗೆ ಒಳಗಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನಾಲ್ಕು ಜನರನ್ನು ಬಂಧಿಸಿದ್ದಾರೆ.
ಈ ನಾಲ್ವರು ಮತೀಯ ಗಲಭೆಗಳಲ್ಲಿ ಈ ಹಿಂದೆ ಭಾಗಿಯಾಗಿದ್ದರು ಎಂಬ ಮಾಹಿತಿ ದೊರೆತಿದೆ. ಶನಿವಾರ ಮಧ್ಯಾಹ್ನ ಈ ಸಂಬಂಧ ಪೊಲೀಸ್ ಕಮಿಷನರ್ ಅಧಿಕೃತವಾಗಿ ಪ್ರಕಟಿಸುವ ನಿರೀಕ್ಷೆ ಇದೆ.
ಈ ಮಧ್ಯೆ ಬಶೀರ್ ಅವರ ಸ್ಥಿತಿ ಗಂಭೀರವಾಗಿಯೇ ಇದೆ.
ಕಾಟಿಪಳ್ಳದಲ್ಲಿ ಇದೇ 3ರಂದು ದೀಪಕ್ ರಾವ್ ಹತ್ಯೆ ನಡೆದಿತ್ತು. ಅದೇ ದಿನ ರಾತ್ರಿ ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ಬಶೀರ್ ಮೇಲೆ ಹಲ್ಲೆ ನಡೆದಿತ್ತು.