<p><strong>ಗೌರಿಬಿದನೂರು: </strong>‘ತಲತಲಾಂತ ರಗಳಿಂದ ಬಾಯಿಂದ ಬಾಯಿಗೆ ಹರಿದು ಬಂದಿರುವ ಜನಪದ ಕಥೆ ಹಾಗೂ ಜನಪದ ಗೀತೆಗಳು ಇತ್ತೀಚೆಗೆ ಕಣ್ಮರೆಯಾಗುತ್ತಿರುವುದು ಕಳವಳದ ಸಂಗತಿ’ ಎಂದು ಪುರಸಭೆ ಅಧ್ಯಕ್ಷ ಕಲೀಂಉಲ್ಲಾ ಹೇಳಿದರು.</p>.<p>ಪಟ್ಟಣದ ಜ್ಞಾನ ಮಂದಿರ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕ ಶುಕ್ರವಾರ ಏರ್ಪಡಿಸಿದ್ದ ಜನಪದಗೀತೆ ಹಾಗೂ ಭಾವ ಗೀತೆಗಳ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಅನಕ್ಷರಸ್ಥರಾದ ಜನಪದರು ರಾಗಿ ಬೀಸುವಾಗ, ಕಳೆ ತೆಗೆಯುವಾಗ, ಪೈರು ನಾಟಿ ಮಾಡುವ ಸಂದರ್ಭದಲ್ಲಿ ಅನೇಕ ಕಥೆಗಳು ಹೇಳುವ ಜತೆಗೆ ಗೀತೆಗಳನ್ನು ಹಾಡುತ್ತಿದ್ದರು. ಆದರೆ ಇಂದು ಜನಪದ ಕಲೆ, ಸಾಹಿತ್ಯ ನಶಿಸಿ ಹೋಗುತ್ತಿವೆ. ಯುವ ಪೀಳಿಗೆ ಅವುಗಳನ್ನು ಉಳಿಸಿ ಬೆಳೆಸಬೇಕಾಗಿದೆ’ ಎಂದರು.</p>.<p>ಪುರ ಠಾಣೆ ಎಸ್ಐ ಸುಂದರ್ ಮಾತನಾಡಿ, ‘ವಿದ್ಯಾರ್ಥಿಗಳಲ್ಲಿ ಒಂದಲ್ಲ ಒಂದು ರೀತಿ ಕಲೆ ಅಡಗಿರುತ್ತದೆ. ಅದನ್ನು ಅಭಿವ್ಯಕ್ತಗೊಳಿಸಲು ಇಂತಹ ವೇದಿಕೆಗಳು ಸಹಕಾರಿಯಾಗುತ್ತವೆ. ಶಿಕ್ಷಣ ಎಂದರೆ ಕೇವಲ ಪಠ್ಯ ಪುಸ್ತಕದ ವಿಷಯವಲ್ಲ. ಇಂತಹ ಪಠ್ಯೇತರ ಚಟುವಟಿಕೆಗಳು ಮಕ್ಕಳ ಮನೋವಿಕಾಸಕ್ಕೆ ಬೇಕಾಗುತ್ತವೆ’ ಎಂದು ತಿಳಿಸಿದರು.</p>.<p>‘ಕಲೆಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಮಹತ್ವದ ಜವಾಬ್ದಾರಿ ಯುವ ಸಮುದಾಯದ ಮೇಲಿದೆ. ಈ ಬಗ್ಗೆ ಬಹಳ ಎಚ್ಚರಿಕೆ ಮತ್ತು ಅರಿವು ಅಗತ್ಯ’ ಎಂದು ಹೇಳಿದರು.</p>.<p>ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ವಿ.ರವೀಂದ್ರನಾಥ್, ಜ್ಞಾನ ಮಂದಿರ ಶಾಲೆ ಕಾರ್ಯದರ್ಶಿ ಆವಲಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದರಾಮಯ್ಯ, ಬ್ಯಾಂಕ್ ಮಂಜುನಾಥ್, ಕನ್ನಡ ಸೇನೆ ಅಧ್ಯಕ್ಷ ರಾಮಕೃಷ್ಣಪ್ಪ, ನಾಗರಾಜ್, ಕೃಷ್ಣ ಕುಮಾರಿ, ಗೀತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು: </strong>‘ತಲತಲಾಂತ ರಗಳಿಂದ ಬಾಯಿಂದ ಬಾಯಿಗೆ ಹರಿದು ಬಂದಿರುವ ಜನಪದ ಕಥೆ ಹಾಗೂ ಜನಪದ ಗೀತೆಗಳು ಇತ್ತೀಚೆಗೆ ಕಣ್ಮರೆಯಾಗುತ್ತಿರುವುದು ಕಳವಳದ ಸಂಗತಿ’ ಎಂದು ಪುರಸಭೆ ಅಧ್ಯಕ್ಷ ಕಲೀಂಉಲ್ಲಾ ಹೇಳಿದರು.</p>.<p>ಪಟ್ಟಣದ ಜ್ಞಾನ ಮಂದಿರ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕ ಶುಕ್ರವಾರ ಏರ್ಪಡಿಸಿದ್ದ ಜನಪದಗೀತೆ ಹಾಗೂ ಭಾವ ಗೀತೆಗಳ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಅನಕ್ಷರಸ್ಥರಾದ ಜನಪದರು ರಾಗಿ ಬೀಸುವಾಗ, ಕಳೆ ತೆಗೆಯುವಾಗ, ಪೈರು ನಾಟಿ ಮಾಡುವ ಸಂದರ್ಭದಲ್ಲಿ ಅನೇಕ ಕಥೆಗಳು ಹೇಳುವ ಜತೆಗೆ ಗೀತೆಗಳನ್ನು ಹಾಡುತ್ತಿದ್ದರು. ಆದರೆ ಇಂದು ಜನಪದ ಕಲೆ, ಸಾಹಿತ್ಯ ನಶಿಸಿ ಹೋಗುತ್ತಿವೆ. ಯುವ ಪೀಳಿಗೆ ಅವುಗಳನ್ನು ಉಳಿಸಿ ಬೆಳೆಸಬೇಕಾಗಿದೆ’ ಎಂದರು.</p>.<p>ಪುರ ಠಾಣೆ ಎಸ್ಐ ಸುಂದರ್ ಮಾತನಾಡಿ, ‘ವಿದ್ಯಾರ್ಥಿಗಳಲ್ಲಿ ಒಂದಲ್ಲ ಒಂದು ರೀತಿ ಕಲೆ ಅಡಗಿರುತ್ತದೆ. ಅದನ್ನು ಅಭಿವ್ಯಕ್ತಗೊಳಿಸಲು ಇಂತಹ ವೇದಿಕೆಗಳು ಸಹಕಾರಿಯಾಗುತ್ತವೆ. ಶಿಕ್ಷಣ ಎಂದರೆ ಕೇವಲ ಪಠ್ಯ ಪುಸ್ತಕದ ವಿಷಯವಲ್ಲ. ಇಂತಹ ಪಠ್ಯೇತರ ಚಟುವಟಿಕೆಗಳು ಮಕ್ಕಳ ಮನೋವಿಕಾಸಕ್ಕೆ ಬೇಕಾಗುತ್ತವೆ’ ಎಂದು ತಿಳಿಸಿದರು.</p>.<p>‘ಕಲೆಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಮಹತ್ವದ ಜವಾಬ್ದಾರಿ ಯುವ ಸಮುದಾಯದ ಮೇಲಿದೆ. ಈ ಬಗ್ಗೆ ಬಹಳ ಎಚ್ಚರಿಕೆ ಮತ್ತು ಅರಿವು ಅಗತ್ಯ’ ಎಂದು ಹೇಳಿದರು.</p>.<p>ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ವಿ.ರವೀಂದ್ರನಾಥ್, ಜ್ಞಾನ ಮಂದಿರ ಶಾಲೆ ಕಾರ್ಯದರ್ಶಿ ಆವಲಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದರಾಮಯ್ಯ, ಬ್ಯಾಂಕ್ ಮಂಜುನಾಥ್, ಕನ್ನಡ ಸೇನೆ ಅಧ್ಯಕ್ಷ ರಾಮಕೃಷ್ಣಪ್ಪ, ನಾಗರಾಜ್, ಕೃಷ್ಣ ಕುಮಾರಿ, ಗೀತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>