<p><strong>ಬೆಂಗಳೂರು: </strong>ಸಮಿತಿಯಲ್ಲಿ ಮಹಿಳಾ ಸದಸ್ಯರ ನೇಮಕಕ್ಕೆ ರಾಜ್ಯ ಅಲ್ಪಸಂಖ್ಯಾತ ಆಯೋಗಕ್ಕೆ ಮನವಿ ಮಾಡುತ್ತೇವೆ. ಆಸಕ್ತಿ ಇರುವವರು ದಾಖಲೆ ಸಮೇತ ಸಮಿತಿಗೆ ಜನವರಿ 25ರೊಳಗೆ ಅಹವಾಲು ಸಲ್ಲಿಸಲು ಅವಕಾಶವಿದೆ ಎಂದು ತಜ್ಞರ ಸಮಿತಿ ಅಧಕ್ಷ ನಿವೃತ್ತ ನ್ಯಾ.ನಾಗಮೋಹನ್ ದಾಸ್ ಹೇಳಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. </p>.<p>‘ವೈಜ್ಞಾನಿಕವಾಗಿ, ಕಾನೂನಾತ್ಮಕವಾಗಿ ಕಾರ್ಯನಿರ್ವಹಿಸುತ್ತೇವೆ. ಪ್ರತ್ಯೆಕ ಧರ್ಮ ಮತ್ತು ಅಲ್ಪಸಂಖ್ಯಾತರ ಸ್ಥಾನಮಾನ ಎರಡನ್ನೂ ನಾವು ಪರಾಮರ್ಶಿಸುತ್ತೇವೆ. ಎಲ್ಲರ ಅಹವಾಲು ಮನವಿಗಳಿಗೂ ಪ್ರಾಮುಖ್ಯತೆ ಇದ್ದು, ಯಾವುದನ್ನೂ ಕಡೆಗಣಿಸುವುದಿಲ್ಲ. ನಮ್ಮ ವರದಿಗೆ ಪರ–ವಿರೋಧ ಅಭಿಪ್ರಾಯ ವ್ಯಕ್ತಪಡಿಸಬಹುದು’ ಎಂದರು.</p>.<p>‘ಜನವರಿ 25ರೊಳಗೆ ಆಸಕ್ತಿ ಇರುವವರು ಸಮಿತಿಗೆ ತಮ್ಮ ಅಹವಾಲು ಸಲ್ಲಿಸಲು ಅವಕಾಶವಿದೆ. ಸಂಘ–ಸಂಸ್ಥೆಗಳು, ಮಠಾಧೀಶರು, ಇತರ ವ್ಯಕ್ತಿಗಳು ಸೇರಿ ಈಗಾಗಲೇ 36 ಅಹವಾಲು ಬಂದಿವೆ.</p>.<p>ನಮ್ಮ ಕೆಲಸವನ್ನು ನಾವು ಕಾನೂನಾತ್ಮಕವಾಗಿ ಮಾಡುತ್ತೇವೆ. ಕೋರ್ಟಿನಲ್ಲಿ ವ್ಯಾಜ್ಯ ಇರುವುದರಿಂದ ಕೋರ್ಟ್ ವಿಚಾರಕ್ಕೆ ನಾನು ಪ್ರತಿಕ್ರಿಯಿಸುವುದಿಲ್ಲ. ಎಲ್ಲ ಅಹವಾಲುಗಳನ್ನು ಪರಾಮರ್ಶಿಸಲಾಗುತ್ತದೆ.</p>.<p>ಜ.27ಕ್ಕೆ ತಜ್ಞರ ಸಮಿತಿ ಎರಡನೇ ಸಭೆ ನಡೆಸಲು ತೀರ್ಮಾನಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>* ಸರ್ಕಾರ ಕೊಟ್ಟಿರುವ 4 ವಾರದ ಕಾಲಾವಕಾಶದಲ್ಲಿ ನಮ್ಮ ಕೆಲಸ ಮುಗಿಸಲು ಸಾಧ್ಯವಿಲ್ಲ. ಸಮಿತಿಗೆ ಕನಿಷ್ಠ 6 ತಿಂಗಳು ಸಮಯ ಒದಗಿಸಲು ಸರ್ಕಾರಕ್ಕೆ ಮನವಿ ಮಾಡಲಾಗುತ್ತದೆ.<br /> <em><strong>–ನಿವೃತ್ತ ನ್ಯಾ.ನಾಗಮೋಹನ್ ದಾಸ್, ತಜ್ಞರ ಸಮಿತಿ ಅಧ್ಯಕ್ಷ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಮಿತಿಯಲ್ಲಿ ಮಹಿಳಾ ಸದಸ್ಯರ ನೇಮಕಕ್ಕೆ ರಾಜ್ಯ ಅಲ್ಪಸಂಖ್ಯಾತ ಆಯೋಗಕ್ಕೆ ಮನವಿ ಮಾಡುತ್ತೇವೆ. ಆಸಕ್ತಿ ಇರುವವರು ದಾಖಲೆ ಸಮೇತ ಸಮಿತಿಗೆ ಜನವರಿ 25ರೊಳಗೆ ಅಹವಾಲು ಸಲ್ಲಿಸಲು ಅವಕಾಶವಿದೆ ಎಂದು ತಜ್ಞರ ಸಮಿತಿ ಅಧಕ್ಷ ನಿವೃತ್ತ ನ್ಯಾ.ನಾಗಮೋಹನ್ ದಾಸ್ ಹೇಳಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. </p>.<p>‘ವೈಜ್ಞಾನಿಕವಾಗಿ, ಕಾನೂನಾತ್ಮಕವಾಗಿ ಕಾರ್ಯನಿರ್ವಹಿಸುತ್ತೇವೆ. ಪ್ರತ್ಯೆಕ ಧರ್ಮ ಮತ್ತು ಅಲ್ಪಸಂಖ್ಯಾತರ ಸ್ಥಾನಮಾನ ಎರಡನ್ನೂ ನಾವು ಪರಾಮರ್ಶಿಸುತ್ತೇವೆ. ಎಲ್ಲರ ಅಹವಾಲು ಮನವಿಗಳಿಗೂ ಪ್ರಾಮುಖ್ಯತೆ ಇದ್ದು, ಯಾವುದನ್ನೂ ಕಡೆಗಣಿಸುವುದಿಲ್ಲ. ನಮ್ಮ ವರದಿಗೆ ಪರ–ವಿರೋಧ ಅಭಿಪ್ರಾಯ ವ್ಯಕ್ತಪಡಿಸಬಹುದು’ ಎಂದರು.</p>.<p>‘ಜನವರಿ 25ರೊಳಗೆ ಆಸಕ್ತಿ ಇರುವವರು ಸಮಿತಿಗೆ ತಮ್ಮ ಅಹವಾಲು ಸಲ್ಲಿಸಲು ಅವಕಾಶವಿದೆ. ಸಂಘ–ಸಂಸ್ಥೆಗಳು, ಮಠಾಧೀಶರು, ಇತರ ವ್ಯಕ್ತಿಗಳು ಸೇರಿ ಈಗಾಗಲೇ 36 ಅಹವಾಲು ಬಂದಿವೆ.</p>.<p>ನಮ್ಮ ಕೆಲಸವನ್ನು ನಾವು ಕಾನೂನಾತ್ಮಕವಾಗಿ ಮಾಡುತ್ತೇವೆ. ಕೋರ್ಟಿನಲ್ಲಿ ವ್ಯಾಜ್ಯ ಇರುವುದರಿಂದ ಕೋರ್ಟ್ ವಿಚಾರಕ್ಕೆ ನಾನು ಪ್ರತಿಕ್ರಿಯಿಸುವುದಿಲ್ಲ. ಎಲ್ಲ ಅಹವಾಲುಗಳನ್ನು ಪರಾಮರ್ಶಿಸಲಾಗುತ್ತದೆ.</p>.<p>ಜ.27ಕ್ಕೆ ತಜ್ಞರ ಸಮಿತಿ ಎರಡನೇ ಸಭೆ ನಡೆಸಲು ತೀರ್ಮಾನಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>* ಸರ್ಕಾರ ಕೊಟ್ಟಿರುವ 4 ವಾರದ ಕಾಲಾವಕಾಶದಲ್ಲಿ ನಮ್ಮ ಕೆಲಸ ಮುಗಿಸಲು ಸಾಧ್ಯವಿಲ್ಲ. ಸಮಿತಿಗೆ ಕನಿಷ್ಠ 6 ತಿಂಗಳು ಸಮಯ ಒದಗಿಸಲು ಸರ್ಕಾರಕ್ಕೆ ಮನವಿ ಮಾಡಲಾಗುತ್ತದೆ.<br /> <em><strong>–ನಿವೃತ್ತ ನ್ಯಾ.ನಾಗಮೋಹನ್ ದಾಸ್, ತಜ್ಞರ ಸಮಿತಿ ಅಧ್ಯಕ್ಷ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>