ಹೋಬಳಿವ್ಯಾಪ್ತಿಯ ಗ್ರಾಮಗಳಲ್ಲಿ ಪ್ರತಿ ವರ್ಷವು ಮುಂಗಾರು ಬಿತ್ತನೆ ವೇಳೆಯಲ್ಲಿ ರೈತರು ಸಜ್ಜೆ, ನವಣೆ , ತೊಗರಿ, ಹೆಸರು ಜೊತೆಗೆ ಅವರೆಕಾಯಿ ಬೆಳೆಯುತ್ತಾರೆ. ಆದರೆ ಈ ವರ್ಷ ಹೆಚ್ಚು ಬಿತ್ತನೆ ಮಾಡಿರುವ ರೈತರು ಉತ್ತಮ ಆದಾಯದ ನಿರೀಕ್ಷೆಯಲ್ಲಿದ್ದರು. ಆದರೆ ಈಗ ಅವರೆಕಾಯಿಗೆ ಕೀಟಬಾಧೆ ಎದುರಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದಾರೆ.