‘ಪಕ್ಷದ ಕೆಲವು ಮುಖಂಡರು ಟಿಕೆಟ್ ಆಕಾಂಕ್ಷಿಗಳೆಂದು ಹೇಳಿಕೊಂಡು ಪ್ರಚಾರ ನಡೆಸುತ್ತಿದ್ದು, ಅದನ್ನು ತಡೆಯಬೇಕು. ಇಲ್ಲವಾದಲ್ಲಿ ಯಾತ್ರೆಯಿಂದ ದೂರ ಉಳಿಯುತ್ತೇನೆ’ ಎಂದು ಆನಂದ್ ಸಿಂಗ್ ಪಕ್ಷದ ಹಿರಿಯ ಮುಖಂಡರಿಗೆ ಹೇಳಿದ್ದರು. ಆದರೆ, ಪಕ್ಷದ ವರಿಷ್ಠರಿಂದ ಸೂಕ್ತ ಭರವಸೆ ಸಿಗದ ಕಾರಣ ಯಾತ್ರೆಯಿಂದ ಅವರು ದೂರ ಉಳಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ.