‘ನಂಜನಗೂಡಿನ ಉದೂರು ಬಳಿ ಚಿನ್ನದ ನಿಕ್ಷೇಪದ ಶೋಧ ಕಾರ್ಯವನ್ನು ಕೆಐಒಸಿಎಲ್ಗೆ ವಹಿಸಲಾಗಿದೆ. ವಿಶಾಖಪಟ್ಟಣದ ರಾಷ್ಟ್ರೀಯ ಇಸ್ಪಾತ್ ನಿಗಮ ಲಿಮಿಟೆಡ್ (ಆರ್ಐಎನ್ಎಲ್) ಜತೆಗೆ ಕೆಐಒಸಿಎಲ್ ಒಪ್ಪಂದ ಮಾಡಿಕೊಂಡಿದ್ದು, ವಿಶಾಖಪಟ್ಟಣದಲ್ಲಿ ಕಬ್ಬಿಣದ ಉಂಡೆಗಳ ತಯಾರಿಕೆ ಘಟಕವನ್ನು ಸ್ಥಾಪಿಸಲಿದೆ. ಇಲ್ಲಿ ಉತ್ಪಾದಿಸುವ ಕಬ್ಬಿಣವನ್ನು ಆರ್ಐಎನ್ಎಲ್ಗೆ ಒದಗಿಸಲಾಗುತ್ತಿದ್ದು, ಹೆಚ್ಚಿನ ಕಬ್ಬಿಣವನ್ನು ವಿದೇಶಗಳಿಗೆ ರಫ್ತು ಮಾಡಲಾಗುವುದು’ ಎಂದು ತಿಳಿಸಿದರು.