<p><strong>ಬೆಂಗಳೂರು: </strong>ಲೋಕಾಯುಕ್ತ ಸಂಸ್ಥೆಗೆ ಹೊಸದಾಗಿ 5 ಹೆಚ್ಚುವರಿ ನಿಬಂಧಕರು ಸೇರಿ 20 ಹುದ್ದೆಗಳನ್ನು ಸರ್ಕಾರ ಮಂಜೂರು ಮಾಡಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ತಿಳಿಸಿದರು.</p>.<p>ಲೋಕಾಯುಕ್ತ ಪೊಲೀಸ್ ಸಿಬ್ಬಂದಿಗಾಗಿ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹೆಚ್ಚುವರಿ ನಿಬಂಧಕರಿಗೆ ಅಗತ್ಯ ಇರುವ ಗ್ರೂಪ್ ‘ಡಿ’, ಪ್ರಥಮ ದರ್ಜೆ ಸಹಾಯಕರು ಮತ್ತು ತೀರ್ಪು ಬರಹಗಾರರ ತಲಾ 5 ಹುದ್ದೆಗಳನ್ನೂ ಮಂಜೂರು ಮಾಡಿದೆ ಎಂದರು.</p>.<p>ಸಂಸ್ಥೆಯಲ್ಲಿ ಇಲಾಖಾ ವಿಚಾರಣೆಯ 3034 ಪ್ರಕಣಗಳು ಬಾಕಿ ಇದ್ದು, 2017ರಲ್ಲಿ 841 ಹೊಸ ಪ್ರಕರಣಗಳು ದಾಖಲಾಗಿವೆ. ಇವುಗಳ ತ್ವರಿತ ವಿಲೇವಾರಿಗೆ ಈಗಿರುವ 11 ಹೆಚ್ಚುವರಿ ನಿಬಂಧಕರ ಜೊತೆಗೆ 9 ಹುದ್ದೆಗಳನ್ನು ಮಂಜೂರು ಮಾಡಲು ಕೋರಲಾಗಿತ್ತು ಎಂದು ಹೇಳಿದರು.</p>.<p>ಲಂಚ ಪ್ರಕರಣಗಳು ಮಾತ್ರವಲ್ಲದೆ ಸರ್ಕಾರ ಯೋಜನೆಗಳು ಸಮರ್ಪಕವಾಗಿ ಕಾರ್ಯರೂಪಕ್ಕೆ ಬರುತ್ತಿವೆಯೇ ಎಂಬುದನ್ನೂ ಲೋಕಾಯುಕ್ತ ಸಂಸ್ಥೆ ಪರಿಶೀಲಿಸುತ್ತಿದೆ. ಇಂದಿರಾ ಕ್ಯಾಂಟೀನ್ನಲ್ಲಿ ಆಹಾರದ ಗುಣಮಟ್ಟವನ್ನು ಲೋಕಾಯುಕ್ತ ಸಿಂಬ್ಬಂದಿ ಗೌಪ್ಯವಾಗಿ ಪರಿಶೀಲಿಸುತ್ತಿದ್ದಾರೆ. ಈಗಾಗಲೇ ಎರಡು ವರದಿಗಳನ್ನು ನೀಡಿದ್ದಾರೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಲೋಕಾಯುಕ್ತ ಸಂಸ್ಥೆಗೆ ಹೊಸದಾಗಿ 5 ಹೆಚ್ಚುವರಿ ನಿಬಂಧಕರು ಸೇರಿ 20 ಹುದ್ದೆಗಳನ್ನು ಸರ್ಕಾರ ಮಂಜೂರು ಮಾಡಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ತಿಳಿಸಿದರು.</p>.<p>ಲೋಕಾಯುಕ್ತ ಪೊಲೀಸ್ ಸಿಬ್ಬಂದಿಗಾಗಿ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹೆಚ್ಚುವರಿ ನಿಬಂಧಕರಿಗೆ ಅಗತ್ಯ ಇರುವ ಗ್ರೂಪ್ ‘ಡಿ’, ಪ್ರಥಮ ದರ್ಜೆ ಸಹಾಯಕರು ಮತ್ತು ತೀರ್ಪು ಬರಹಗಾರರ ತಲಾ 5 ಹುದ್ದೆಗಳನ್ನೂ ಮಂಜೂರು ಮಾಡಿದೆ ಎಂದರು.</p>.<p>ಸಂಸ್ಥೆಯಲ್ಲಿ ಇಲಾಖಾ ವಿಚಾರಣೆಯ 3034 ಪ್ರಕಣಗಳು ಬಾಕಿ ಇದ್ದು, 2017ರಲ್ಲಿ 841 ಹೊಸ ಪ್ರಕರಣಗಳು ದಾಖಲಾಗಿವೆ. ಇವುಗಳ ತ್ವರಿತ ವಿಲೇವಾರಿಗೆ ಈಗಿರುವ 11 ಹೆಚ್ಚುವರಿ ನಿಬಂಧಕರ ಜೊತೆಗೆ 9 ಹುದ್ದೆಗಳನ್ನು ಮಂಜೂರು ಮಾಡಲು ಕೋರಲಾಗಿತ್ತು ಎಂದು ಹೇಳಿದರು.</p>.<p>ಲಂಚ ಪ್ರಕರಣಗಳು ಮಾತ್ರವಲ್ಲದೆ ಸರ್ಕಾರ ಯೋಜನೆಗಳು ಸಮರ್ಪಕವಾಗಿ ಕಾರ್ಯರೂಪಕ್ಕೆ ಬರುತ್ತಿವೆಯೇ ಎಂಬುದನ್ನೂ ಲೋಕಾಯುಕ್ತ ಸಂಸ್ಥೆ ಪರಿಶೀಲಿಸುತ್ತಿದೆ. ಇಂದಿರಾ ಕ್ಯಾಂಟೀನ್ನಲ್ಲಿ ಆಹಾರದ ಗುಣಮಟ್ಟವನ್ನು ಲೋಕಾಯುಕ್ತ ಸಿಂಬ್ಬಂದಿ ಗೌಪ್ಯವಾಗಿ ಪರಿಶೀಲಿಸುತ್ತಿದ್ದಾರೆ. ಈಗಾಗಲೇ ಎರಡು ವರದಿಗಳನ್ನು ನೀಡಿದ್ದಾರೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>