2015ರ ಆಗಸ್ಟ್ 30ರಂದು ಅಪರಿಚಿತರ ಗುಂಡಿಗೆ ಕಲಬುರ್ಗಿ ಬಲಿಯಾಗಿದ್ದರು. ರಾಜ್ಯ ಸರ್ಕಾರ, ಪ್ರಕರಣವನ್ನು ಸಿಐಡಿಗೆ ವಹಿಸಿತ್ತು. ಆದರೆ ಕೊಲೆಗಾರರ ಸುಳಿವು ಈವರೆಗೂ ಲಭ್ಯವಾಗದೇ ಇರುವುದರಿಂದ ಬೇಸರಗೊಂಡಿರುವ ಕುಟುಂಬ, ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಸ್ವತಂತ್ರ ತನಿಖೆ ನಡೆಸಬೇಕು ಎಂದು ನ್ಯಾಯಾಲಯವನ್ನು ಮನವಿ ಮಾಡಿಕೊಂಡಿದೆ.