1.5 ಲಕ್ಷ ಬೀದಿಬದಿ ವ್ಯಾಪಾರಿಗಳು: ಪಾಲಿಕೆಯ ವ್ಯಾಪ್ತಿಯಲ್ಲಿ 1.5 ಲಕ್ಷ ಬೀದಿಬದಿ ವ್ಯಾಪಾರಿಗಳಿದ್ದಾರೆ. ಸಮೀಕ್ಷೆಯ ಬಗ್ಗೆ ಬಹಳಷ್ಟು ವ್ಯಾಪಾರಿಗಳಿಗೆ ಮಾಹಿತಿ ಸಿಕ್ಕಿಲ್ಲ. ಹೀಗಾಗಿ ಸಮೀಕ್ಷೆಯಲ್ಲಿ ಪಾಲ್ಗೊಂಡಿರಲಿಲ್ಲ. ಕೆ.ಆರ್.ಮಾರುಕಟ್ಟೆ, ಗಾಂಧಿನಗರ ಹಾಗೂ ಮಲ್ಲೇಶ್ವರ ಭಾಗಗಳಲ್ಲಿ ವ್ಯಾಪಾರಿಗಳ ಸಮೀಕ್ಷೆ ನಡೆಸಲು ಜನಪ್ರತಿನಿಧಿಗಳು ಅವಕಾಶ ನೀಡಿಲ್ಲ. ಅವರ ಮನವೊಲಿಸಿ ಸಮೀಕ್ಷೆ ನಡೆಸಬೇಕು ಎಂದು ಬೀದಿಬದಿ ವ್ಯಾಪಾರಿಗಳ ಒಕ್ಕೂಟದ ಅಧ್ಯಕ್ಷ ರಂಗಸ್ವಾಮಿ ಒತ್ತಾಯಿಸಿದರು.