<p><strong>ಬೆಂಗಳೂರು: </strong>ಕೇಂದ್ರ ನಗರಾಭಿವೃದ್ಧಿ ಇಲಾಖೆಯು ನಡೆಸುತ್ತಿರುವ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯು ನಗರದಲ್ಲಿ ಆರಂಭವಾಗಿದೆ.</p>.<p>ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಬಿಬಿಎಂಪಿಯು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಈ ವರದಿಯಲ್ಲಿನ ಅಂಶಗಳ ಬಗ್ಗೆ ಪರಿಶೀಲಿಸಲು ಕೇಂದ್ರದ ತಂಡವು ಸಮೀಕ್ಷಾ ಕಾರ್ಯ ಆರಂಭಿಸಿದ್ದು, ಮಾರ್ಚ್ 10ರವರೆಗೆ ನಡೆಯಲಿದೆ.</p>.<p>ತಂಡದ ಸದಸ್ಯರು ಸಾರ್ವಜನಿಕ ಸ್ಥಳಗಳು, ಮಾರುಕಟ್ಟೆ, ಆಸ್ಪತ್ರೆ ಹಾಗೂ ಪ್ರಮುಖ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಪಾಲಿಕೆಯು ಕೈಗೊಂಡಿರುವ ಕ್ರಮಗಳ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸಲಿದ್ದಾರೆ.</p>.<p>ನಾಲ್ಕು ವರ್ಷಗಳಿಗೆ ಹೋಲಿಸಿದಾಗ ನಗರವು ಈಗ ಸ್ವಚ್ಛತೆಯಿಂದ ಕೂಡಿದೆಯೇ ಎಂಬುದರ ಕುರಿತು ಸ್ವಯಂ ಪರಿಶೀಲನೆ ನಡೆಸಲಿದ್ದಾರೆ. ಈ ಬಗ್ಗೆ ಪಾಲಿಕೆಯಿಂದ ತಪ್ಪು ಮಾಹಿತಿ ನೀಡಿರುವುದು ಕಂಡುಬಂದರೆ, ಆಗ ನಕಾರಾತ್ಮಕ ಅಂಕ ನೀಡಲಿದ್ದಾರೆ.</p>.<p>ಸ್ವಚ್ಛ ಸರ್ವೇಕ್ಷಣೆಯಲ್ಲಿ ಉತ್ತಮ ಅಂಕ ಪಡೆದುಕೊಳ್ಳಬೇಕಾದರೆ ಜನಾಭಿಪ್ರಾಯ ರೂಪಿಸುವುದು ಮುಖ್ಯ. 1 ಕೋಟಿ ಜನರಿರುವ ನಗರ<br /> ದಲ್ಲಿ ಕನಿಷ್ಠ 3.5 ಲಕ್ಷ ಜನರು ಸ್ವಚ್ಛ ಸರ್ವೇಕ್ಷಣೆಯ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಅಭಿಪ್ರಾಯ ತಿಳಿಸಬೇಕು. ಆದರೆ, ಪಾಲಿಕೆಯಿಂದ ಈ ಬಗ್ಗೆ ಸರಿಯಾಗಿ ಅರಿವು ಮೂಡಿಸದ ಕಾರಣ, ಕಡಿಮೆ ಜನರು ಆ್ಯಪ್ ಡೌನ್ಲೋಡ್ ಮಾಡಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೇಂದ್ರ ನಗರಾಭಿವೃದ್ಧಿ ಇಲಾಖೆಯು ನಡೆಸುತ್ತಿರುವ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯು ನಗರದಲ್ಲಿ ಆರಂಭವಾಗಿದೆ.</p>.<p>ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಬಿಬಿಎಂಪಿಯು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಈ ವರದಿಯಲ್ಲಿನ ಅಂಶಗಳ ಬಗ್ಗೆ ಪರಿಶೀಲಿಸಲು ಕೇಂದ್ರದ ತಂಡವು ಸಮೀಕ್ಷಾ ಕಾರ್ಯ ಆರಂಭಿಸಿದ್ದು, ಮಾರ್ಚ್ 10ರವರೆಗೆ ನಡೆಯಲಿದೆ.</p>.<p>ತಂಡದ ಸದಸ್ಯರು ಸಾರ್ವಜನಿಕ ಸ್ಥಳಗಳು, ಮಾರುಕಟ್ಟೆ, ಆಸ್ಪತ್ರೆ ಹಾಗೂ ಪ್ರಮುಖ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಪಾಲಿಕೆಯು ಕೈಗೊಂಡಿರುವ ಕ್ರಮಗಳ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸಲಿದ್ದಾರೆ.</p>.<p>ನಾಲ್ಕು ವರ್ಷಗಳಿಗೆ ಹೋಲಿಸಿದಾಗ ನಗರವು ಈಗ ಸ್ವಚ್ಛತೆಯಿಂದ ಕೂಡಿದೆಯೇ ಎಂಬುದರ ಕುರಿತು ಸ್ವಯಂ ಪರಿಶೀಲನೆ ನಡೆಸಲಿದ್ದಾರೆ. ಈ ಬಗ್ಗೆ ಪಾಲಿಕೆಯಿಂದ ತಪ್ಪು ಮಾಹಿತಿ ನೀಡಿರುವುದು ಕಂಡುಬಂದರೆ, ಆಗ ನಕಾರಾತ್ಮಕ ಅಂಕ ನೀಡಲಿದ್ದಾರೆ.</p>.<p>ಸ್ವಚ್ಛ ಸರ್ವೇಕ್ಷಣೆಯಲ್ಲಿ ಉತ್ತಮ ಅಂಕ ಪಡೆದುಕೊಳ್ಳಬೇಕಾದರೆ ಜನಾಭಿಪ್ರಾಯ ರೂಪಿಸುವುದು ಮುಖ್ಯ. 1 ಕೋಟಿ ಜನರಿರುವ ನಗರ<br /> ದಲ್ಲಿ ಕನಿಷ್ಠ 3.5 ಲಕ್ಷ ಜನರು ಸ್ವಚ್ಛ ಸರ್ವೇಕ್ಷಣೆಯ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಅಭಿಪ್ರಾಯ ತಿಳಿಸಬೇಕು. ಆದರೆ, ಪಾಲಿಕೆಯಿಂದ ಈ ಬಗ್ಗೆ ಸರಿಯಾಗಿ ಅರಿವು ಮೂಡಿಸದ ಕಾರಣ, ಕಡಿಮೆ ಜನರು ಆ್ಯಪ್ ಡೌನ್ಲೋಡ್ ಮಾಡಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>