<p><strong>ಬೆಂಗಳೂರು:</strong> ಇಂದಿರಾ ಕ್ಯಾಂಟಿನ್ನ ಮಹಿಳಾ ಕ್ಯಾಷಿಯರ್ಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಕ್ಯಾಂಟಿನ್ನ ಮೇಲಧಿಕಾರಿ ಸತೀಶ್ ವಿರುದ್ಧ ಬಂಡೆಪಾಳ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>‘ನನ್ನೊಂದಿಗೆ ಲೈಂಗಿಕ ಕ್ರಿಯೆಗೆ ಸಹಕರಿಸಿದರೆ ಮಾತ್ರ ನಿನ್ನನ್ನು ಕೆಲಸದಲ್ಲಿ ಮುಂದುವರಿಸುತ್ತೇನೆ. ಇಲ್ಲವಾದರೆ, ಬೇರೆಯವರನ್ನು ನಿನ್ನ ಜಾಗಕ್ಕೆ ನೇಮಿಸುತ್ತೇನೆ’ ಎಂದು ಸತೀಶ್ ಕಿರುಕುಳ ನೀಡುತ್ತಿರುವುದಾಗಿ ಸಂತ್ರಸ್ತೆ ಶುಕ್ರವಾರ ದೂರು ಕೊಟ್ಟಿದ್ದಾರೆ.</p>.<p>ಲೈಂಗಿಕ ದೌರ್ಜನ್ಯ (ಐಪಿಸಿ 354ಎ), ಉದ್ದೇಶ ಪೂರ್ವಕವಾಗಿ ಶಾಂತಿ ಕದಡುವುದು (ಐಪಿಸಿ 504) ಹಾಗೂ ಜೀವ ಬೆದರಿಕೆ (ಐಪಿಸಿ 506) ಆರೋಪಗಳಡಿ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.</p>.<p>‘ಭಾರತೀಯ ಸೇನೆಯಲ್ಲಿದ್ದ ಸತೀಶ್, ಎರಡು ವರ್ಷಗಳ ಹಿಂದೆ ಸ್ವಯಂ ನಿವೃತ್ತಿ ಪಡೆದಿದ್ದರು. ಬಂಡೆಪಾಳ್ಯ ಸೇರಿದಂತೆ ಸುತ್ತಮುತ್ತಲ ಆರು ಇಂದಿರಾ ಕ್ಯಾಂಟಿನ್ಗಳ ಉಸ್ತುವಾರಿಯನ್ನು ಅವರು ನೋಡಿಕೊಳ್ಳುತ್ತಿದ್ದರು. ದೂರು ದಾಖಲಾದ ಬಳಿಕ, ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ಪರಾರಿಯಾಗಿದ್ದಾರೆ’ ಎಂದು ಪೊಲೀಸರು ಹೇಳಿದ್ದಾರೆ.</p>.<p>‘ಹೋಟೆಲ್ನಲ್ಲಿ ಕಿರುಕುಳ ನೀಡುವುದು ಮಾತ್ರವಲ್ಲದೆ, ಪ್ರತಿ ರಾತ್ರಿ ಕರೆ ಮಾಡಿ ಕೆಟ್ಟದಾಗಿ ಮಾತನಾಡುತ್ತಿದ್ದ. ಇತ್ತೀಚೆಗೆ ನನ್ನ ಪತಿಗೂ ಕರೆ ಮಾಡಿ, ‘ನಿಮ್ಮ ಹೆಂಡತಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆ. ಆಕೆಗೆ ಬುದ್ಧಿ ಹೇಳಿ’ ಎಂದಿದ್ದ. ಆ ಬಗ್ಗೆ ಪತಿ ವಿಚಾರಿಸಿದಾಗ, ಸತೀಶ್ ಲೈಂಗಿಕ ಕಿರುಕುಳ ನೀಡುತ್ತಿರುವ ಹಾಗೂ ಆತನ ಬೇಡಿಕೆ ಈಡೇರಿಸದಿದ್ದರೆ ಕೊಲೆ ಮಾಡುವುದಾಗಿ ಬೆದರಿಸುತ್ತಿರುವ ವಿಚಾರಗಳನ್ನು ಅವರ ಗಮನಕ್ಕೆ ತಂದಿದ್ದೆ’ ಎಂದು ಸಂತ್ರಸ್ತೆ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.</p>.<p>‘ಪ್ರಜಾವಾಣಿ’ ಜತೆ ಮಾತನಾಡಿದ ಸಂತ್ರಸ್ತೆಯ ಪತಿ, ‘ಸತೀಶ್ ಹಲವು ದಿನಗಳಿಂದ ಇದೇ ರೀತಿ ವರ್ತಿಸುತ್ತಿದ್ದಾನೆ. ವಾರದ ಹಿಂದೆ ಸ್ಥಳೀಯ ಕಾರ್ಪೊರೇಟರ್ ಮೂಲಕ ಆತನಿಗೆ ಬುದ್ಧಿ ಹೇಳಿಸಿದ್ದೆವು. ಆದರೂ ಬದಲಾಗದ ಕಾರಣಕ್ಕೆ ಪೊಲೀಸರ ಮೊರೆ ಹೋಗಿದ್ದೇವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇಂದಿರಾ ಕ್ಯಾಂಟಿನ್ನ ಮಹಿಳಾ ಕ್ಯಾಷಿಯರ್ಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಕ್ಯಾಂಟಿನ್ನ ಮೇಲಧಿಕಾರಿ ಸತೀಶ್ ವಿರುದ್ಧ ಬಂಡೆಪಾಳ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>‘ನನ್ನೊಂದಿಗೆ ಲೈಂಗಿಕ ಕ್ರಿಯೆಗೆ ಸಹಕರಿಸಿದರೆ ಮಾತ್ರ ನಿನ್ನನ್ನು ಕೆಲಸದಲ್ಲಿ ಮುಂದುವರಿಸುತ್ತೇನೆ. ಇಲ್ಲವಾದರೆ, ಬೇರೆಯವರನ್ನು ನಿನ್ನ ಜಾಗಕ್ಕೆ ನೇಮಿಸುತ್ತೇನೆ’ ಎಂದು ಸತೀಶ್ ಕಿರುಕುಳ ನೀಡುತ್ತಿರುವುದಾಗಿ ಸಂತ್ರಸ್ತೆ ಶುಕ್ರವಾರ ದೂರು ಕೊಟ್ಟಿದ್ದಾರೆ.</p>.<p>ಲೈಂಗಿಕ ದೌರ್ಜನ್ಯ (ಐಪಿಸಿ 354ಎ), ಉದ್ದೇಶ ಪೂರ್ವಕವಾಗಿ ಶಾಂತಿ ಕದಡುವುದು (ಐಪಿಸಿ 504) ಹಾಗೂ ಜೀವ ಬೆದರಿಕೆ (ಐಪಿಸಿ 506) ಆರೋಪಗಳಡಿ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.</p>.<p>‘ಭಾರತೀಯ ಸೇನೆಯಲ್ಲಿದ್ದ ಸತೀಶ್, ಎರಡು ವರ್ಷಗಳ ಹಿಂದೆ ಸ್ವಯಂ ನಿವೃತ್ತಿ ಪಡೆದಿದ್ದರು. ಬಂಡೆಪಾಳ್ಯ ಸೇರಿದಂತೆ ಸುತ್ತಮುತ್ತಲ ಆರು ಇಂದಿರಾ ಕ್ಯಾಂಟಿನ್ಗಳ ಉಸ್ತುವಾರಿಯನ್ನು ಅವರು ನೋಡಿಕೊಳ್ಳುತ್ತಿದ್ದರು. ದೂರು ದಾಖಲಾದ ಬಳಿಕ, ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ಪರಾರಿಯಾಗಿದ್ದಾರೆ’ ಎಂದು ಪೊಲೀಸರು ಹೇಳಿದ್ದಾರೆ.</p>.<p>‘ಹೋಟೆಲ್ನಲ್ಲಿ ಕಿರುಕುಳ ನೀಡುವುದು ಮಾತ್ರವಲ್ಲದೆ, ಪ್ರತಿ ರಾತ್ರಿ ಕರೆ ಮಾಡಿ ಕೆಟ್ಟದಾಗಿ ಮಾತನಾಡುತ್ತಿದ್ದ. ಇತ್ತೀಚೆಗೆ ನನ್ನ ಪತಿಗೂ ಕರೆ ಮಾಡಿ, ‘ನಿಮ್ಮ ಹೆಂಡತಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆ. ಆಕೆಗೆ ಬುದ್ಧಿ ಹೇಳಿ’ ಎಂದಿದ್ದ. ಆ ಬಗ್ಗೆ ಪತಿ ವಿಚಾರಿಸಿದಾಗ, ಸತೀಶ್ ಲೈಂಗಿಕ ಕಿರುಕುಳ ನೀಡುತ್ತಿರುವ ಹಾಗೂ ಆತನ ಬೇಡಿಕೆ ಈಡೇರಿಸದಿದ್ದರೆ ಕೊಲೆ ಮಾಡುವುದಾಗಿ ಬೆದರಿಸುತ್ತಿರುವ ವಿಚಾರಗಳನ್ನು ಅವರ ಗಮನಕ್ಕೆ ತಂದಿದ್ದೆ’ ಎಂದು ಸಂತ್ರಸ್ತೆ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.</p>.<p>‘ಪ್ರಜಾವಾಣಿ’ ಜತೆ ಮಾತನಾಡಿದ ಸಂತ್ರಸ್ತೆಯ ಪತಿ, ‘ಸತೀಶ್ ಹಲವು ದಿನಗಳಿಂದ ಇದೇ ರೀತಿ ವರ್ತಿಸುತ್ತಿದ್ದಾನೆ. ವಾರದ ಹಿಂದೆ ಸ್ಥಳೀಯ ಕಾರ್ಪೊರೇಟರ್ ಮೂಲಕ ಆತನಿಗೆ ಬುದ್ಧಿ ಹೇಳಿಸಿದ್ದೆವು. ಆದರೂ ಬದಲಾಗದ ಕಾರಣಕ್ಕೆ ಪೊಲೀಸರ ಮೊರೆ ಹೋಗಿದ್ದೇವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>