<p><strong>ರಾಂಚಿ/ಪಟ್ನಾ:</strong> ಬಹುಕೋಟಿ ಮೇವು ಹಗರಣದ ಎರಡನೇ ಪ್ರಕರಣದಲ್ಲಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಶನಿವಾರ ಮೂರೂವರೆ ವರ್ಷ ಜೈಲು ಶಿಕ್ಷೆ ಮತ್ತು ₹10 ಲಕ್ಷ ದಂಡ ವಿಧಿಸಿದೆ.</p>.<p>ಸಿಬಿಐ ವಿಶೇಷ ನ್ಯಾಯಾಧೀಶ ಶಿವಪಾಲ್ ಸಿಂಗ್ ವಿಡಿಯೊ ಕಾನ್ಫರೆನ್ಸ್ ಮೂಲಕ ಶಿಕ್ಷೆಯ ಪ್ರಮಾಣ ಘೋಷಿಸಿದರು. ‘ಒಂದು ವೇಳೆ, ಲಾಲು ದಂಡ ಪಾವತಿಸಲು ವಿಫಲರಾದರೆ ಆರು ತಿಂಗಳ ಹೆಚ್ಚುವರಿ ಶಿಕ್ಷೆ ಅನುಭವಿಸಬೇಕಾಗುತ್ತದೆ’ ಎಂದರು.</p>.<p>ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿ (ವಂಚನೆ, ಕ್ರಿಮಿನಲ್ ಪಿತೂರಿ, ದಾಖಲೆ ತಿದ್ದುಪಡಿ) ಲಾಲು ಮತ್ತು ಇತರ 15 ಅಪರಾಧಿಗಳಿಗೆ ಶಿಕ್ಷೆ ವಿಧಿಸಲಾಗಿದೆ.</p>.<p>ಮೇವು ಹಗರಣದ ಒಟ್ಟು ಆರು ಪ್ರಕರಣಗಳಲ್ಲಿ ಲಾಲು ಪ್ರಸಾದ್ ಶಿಕ್ಷೆಗೆ ಗುರಿಯಾದ ಎರಡನೇ ಪ್ರಕರಣ ಇದಾಗಿದೆ.</p>.<p>ದೇವಗಡ ಖಜಾನೆಯಿಂದ ₹89.27 ಲಕ್ಷ ಹಣವನ್ನು ಅಕ್ರಮವಾಗಿ ಪಡೆದ ಹಗರಣ 21 ವರ್ಷಗಳ ಹಿಂದೆ ಬೆಳಕಿಗೆ ಬಂದಿತ್ತು.</p>.<p><strong>ಜಾಮೀನಿಗೆ ಕುತ್ತು</strong></p>.<p>ಸದ್ಯ ರಾಂಚಿಯ ಬಿರ್ಸಾ ಮುಂಡಾ ಜೈಲಿನಲ್ಲಿರುವ ಲಾಲು ಪ್ರಸಾದ್ ಅವರಿಗೆ ತಕ್ಷಣಕ್ಕೆ ಸಿಬಿಐ ವಿಶೇಷ ನ್ಯಾಯಾಲಯದಿಂದ ಜಾಮೀನು ಸಿಗುವುದು ಕಷ್ಟ.</p>.<p>ಶಿಕ್ಷೆಯ ಅವಧಿ ಮೂರು ವರ್ಷಕ್ಕಿಂತ ಹೆಚ್ಚಿರುವ ಕಾರಣ ತಕ್ಷಣಕ್ಕೆ ಸಿಬಿಐ ನ್ಯಾಯಾಲಯದಿಂದ ಜಾಮೀನು ಸಿಗುವುದಿಲ್ಲ. ಹೀಗಾಗಿ ಸೋಮವಾರ ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ಸಲ್ಲಿಸಲಾಗುವುದು ಎಂದು ಲಾಲು ಪರ ವಕೀಲರು ತಿಳಿಸಿದರು.</p>.<p>ತಮ್ಮ ಕಕ್ಷಿದಾರರ ವಯಸ್ಸು (69 ವರ್ಷ) ಮತ್ತು ಆರೋಗ್ಯ ಗಮನದಲ್ಲಿರಿಸಿಕೊಂಡು ಮೂರು ವರ್ಷ ಅಥವಾ ಅದಕ್ಕಿಂತ ಕಡಿಮೆ ಅವಧಿಯ ಶಿಕ್ಷೆ ವಿಧಿಸುವಂತೆ ಇದಕ್ಕೂ ಮೊದಲು ಲಾಲು ಪರ ವಕೀಲರು ನ್ಯಾಯಾಧೀಶರಲ್ಲಿ ಮನವಿ ಮಾಡಿದರು.</p>.<p><strong>ಪ್ರಕರಣದ ಹಿನ್ನೆಲೆ</strong></p>.<p>2017ರ ಡಿ. 23ರಂದು ತೀರ್ಪು ಪ್ರಕಟಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯ, 22 ಆರೋಪಿಗಳ ಪೈಕಿ ಲಾಲು ಸೇರಿದಂತೆ 16 ಮಂದಿಯನ್ನು ತಪ್ಪಿತಸ್ಥರು ಎಂದು ಘೋಷಿಸಿತ್ತು.</p>.<p>ಬಿಹಾರದ ಮಾಜಿ ಮುಖ್ಯಮಂತ್ರಿ ಡಾ. ಜಗನ್ನಾಥ್ ಮಿಶ್ರಾ ಸೇರಿದಂತೆ ಆರು ಮಂದಿಯನ್ನು ಖುಲಾಸೆಗೊಳಿಸಿತ್ತು.</p>.<p>ಬಿಹಾರದ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಮತ್ತು ಆರು ಮಂದಿ ನಿವೃತ್ತ ಅಧಿಕಾರಿಗಳು ಭಾಗಿಯಾಗಿದ್ದ ಈ ಪ್ರಕರಣ ದೇಶದ ಗಮನ ಸೆಳೆದಿತ್ತು.</p>.<p><strong>ಹೈಕೋರ್ಟ್ಗೆ ಮೊರೆ: ತೇಜಸ್ವಿ</strong></p>.<p>ಪಟ್ನಾದಲ್ಲಿ ಪಕ್ಷದ ನಾಯಕರ ಜತೆ ತುರ್ತುಸಭೆ ನಡೆಸಿದ ಲಾಲು ಕಿರಿಯ ಪುತ್ರ ತೇಜಸ್ವಿ ಯಾದವ್, ಜಾಮೀನು ಕೋರಿ ಜಾರ್ಖಂಡ್ ಹೈಕೋರ್ಟ್ನಲ್ಲಿ ಸೋಮವಾರ ಅರ್ಜಿ ಸಲ್ಲಿಸುವುದಾಗಿ ಹೇಳಿದರು.</p>.<p>‘ಲಾಲು ಅವರೊಬ್ಬರೇ ಭ್ರಷ್ಟರು ಎಂದು ಬಿಂಬಿಸುವ ಯತ್ನ ನಡೆಯುತ್ತಿದೆ. ಬಿಹಾರದಲ್ಲಿ ನಡೆದ ₹1000 ಕೋಟಿಗಳ ಸೃಜನ್ ಹಗರಣದ ಬಗ್ಗೆ ಏಕೆ ಯಾರೂ ಚಕಾರ ಎತ್ತುತ್ತಿಲ್ಲ’ ಎಂದು ಅವರು ಪ್ರಶ್ನಿಸಿದರು.</p>.<p><strong>ಷಡ್ಯಂತ್ರಕ್ಕೆ ಬಲಿ: ಆರ್ಜೆಡಿ ಟೀಕೆ</strong></p>.<p>‘ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಬಿಜೆಪಿಯ ಷಡ್ಯಂತ್ರಕ್ಕೆ ಲಾಲು ಪ್ರಸಾದ್ ಬಲಿಯಾಗಿದ್ದಾರೆ’ ಎಂದು ಆರ್ಜೆಡಿ ಆರೋಪಿಸಿದೆ.</p>.<p>‘ದೇಶ ಕೊಳ್ಳೆ ಹೊಡೆದವರು ಎಂತಹ ದೊಡ್ಡ ವ್ಯಕ್ತಿಯಾದರೂ ನ್ಯಾಯ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನ್ಯಾಯದ ಎದುರು ಎಲ್ಲರೂ ಸಮಾನರು’ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ.</p>.<p>‘ಲಾಲು ಪ್ರಸಾದ್ ನಾಯಕತ್ವದಲ್ಲಿ ಆರಂಭವಾಗಿದ್ದ ಭ್ರಷ್ಟಾಚಾರ ರಾಜಕಾರಣದ ಅಧ್ಯಾಯಕ್ಕೆ ಇದರೊಂದಿಗೆ ತೆರೆ ಬಿದ್ದಿದೆ’ ಎಂದು ಜೆಡಿಯು ಹೇಳಿದೆ.</p>.<p>‘ಕಾಂಗ್ರೆಸ್ ಯಾವಾಗಲೂ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದೆ. ಆರ್ಜೆಡಿಯೊಂದಿಗೆ ನಾವು ಮೈತ್ರಿ ಮಾಡಿದ್ದೇವೆ ವಿನಾ ನಿರ್ದಿಷ್ಟ ವ್ಯಕ್ತಿಯೊಂದಿಗೆ ಅಲ್ಲ’ ಎಂದು ಕಾಂಗ್ರೆಸ್ ಹೇಳಿದೆ.</p>.<p><strong>ಮೊದಲ ಪ್ರಕರಣದಲ್ಲಿ ಐದು ವರ್ಷ ಜೈಲು</strong></p>.<p>ಮೇವು ಹಗರಣದ ಮೊದಲ ಪ್ರಕರಣದಲ್ಲಿ (ಆರ್ಸಿ 20ಎ/96) 2013ರ ಸೆಪ್ಟೆಂಬರ್ 13ರಂದು ನ್ಯಾಯಾಲಯ ಲಾಲು ಪ್ರಸಾದ್ ಅವರಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.</p>.<p>ಇದರಿಂದಾಗಿ ಲೋಕಸಭಾ ಸದಸ್ವತ್ವ ಕಳೆದುಕೊಂಡಿದ್ದ ಅವರು, ಮೂರು ತಿಂಗಳಲ್ಲೇ ಸುಪ್ರೀಂ ಕೋರ್ಟ್ನಿಂದ ಜಾಮೀನು ಪಡೆದಿದ್ದರು.</p>.<p><strong>ಬಾಕಿ ಇರುವ ಪ್ರಕರಣ</strong></p>.<p>* ದುಮಕಾ ಖಜಾನೆಯಿಂದ ₹3.97 ಕೋಟಿ ಪಡೆದ ಪ್ರಕರಣ</p>.<p>* ಚಾಯೀಬಾಸಾ ಖಜಾನೆಯಿಂದ ₹36 ಕೋಟಿ ಬಳಸಿದ ಪ್ರಕರಣ</p>.<p>* ಡೋರಂಡಾ ಖಜಾನೆಯಿಂದ ₹184 ಕೋಟಿ ತೆಗೆದ ಪ್ರಕರಣ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ/ಪಟ್ನಾ:</strong> ಬಹುಕೋಟಿ ಮೇವು ಹಗರಣದ ಎರಡನೇ ಪ್ರಕರಣದಲ್ಲಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಶನಿವಾರ ಮೂರೂವರೆ ವರ್ಷ ಜೈಲು ಶಿಕ್ಷೆ ಮತ್ತು ₹10 ಲಕ್ಷ ದಂಡ ವಿಧಿಸಿದೆ.</p>.<p>ಸಿಬಿಐ ವಿಶೇಷ ನ್ಯಾಯಾಧೀಶ ಶಿವಪಾಲ್ ಸಿಂಗ್ ವಿಡಿಯೊ ಕಾನ್ಫರೆನ್ಸ್ ಮೂಲಕ ಶಿಕ್ಷೆಯ ಪ್ರಮಾಣ ಘೋಷಿಸಿದರು. ‘ಒಂದು ವೇಳೆ, ಲಾಲು ದಂಡ ಪಾವತಿಸಲು ವಿಫಲರಾದರೆ ಆರು ತಿಂಗಳ ಹೆಚ್ಚುವರಿ ಶಿಕ್ಷೆ ಅನುಭವಿಸಬೇಕಾಗುತ್ತದೆ’ ಎಂದರು.</p>.<p>ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿ (ವಂಚನೆ, ಕ್ರಿಮಿನಲ್ ಪಿತೂರಿ, ದಾಖಲೆ ತಿದ್ದುಪಡಿ) ಲಾಲು ಮತ್ತು ಇತರ 15 ಅಪರಾಧಿಗಳಿಗೆ ಶಿಕ್ಷೆ ವಿಧಿಸಲಾಗಿದೆ.</p>.<p>ಮೇವು ಹಗರಣದ ಒಟ್ಟು ಆರು ಪ್ರಕರಣಗಳಲ್ಲಿ ಲಾಲು ಪ್ರಸಾದ್ ಶಿಕ್ಷೆಗೆ ಗುರಿಯಾದ ಎರಡನೇ ಪ್ರಕರಣ ಇದಾಗಿದೆ.</p>.<p>ದೇವಗಡ ಖಜಾನೆಯಿಂದ ₹89.27 ಲಕ್ಷ ಹಣವನ್ನು ಅಕ್ರಮವಾಗಿ ಪಡೆದ ಹಗರಣ 21 ವರ್ಷಗಳ ಹಿಂದೆ ಬೆಳಕಿಗೆ ಬಂದಿತ್ತು.</p>.<p><strong>ಜಾಮೀನಿಗೆ ಕುತ್ತು</strong></p>.<p>ಸದ್ಯ ರಾಂಚಿಯ ಬಿರ್ಸಾ ಮುಂಡಾ ಜೈಲಿನಲ್ಲಿರುವ ಲಾಲು ಪ್ರಸಾದ್ ಅವರಿಗೆ ತಕ್ಷಣಕ್ಕೆ ಸಿಬಿಐ ವಿಶೇಷ ನ್ಯಾಯಾಲಯದಿಂದ ಜಾಮೀನು ಸಿಗುವುದು ಕಷ್ಟ.</p>.<p>ಶಿಕ್ಷೆಯ ಅವಧಿ ಮೂರು ವರ್ಷಕ್ಕಿಂತ ಹೆಚ್ಚಿರುವ ಕಾರಣ ತಕ್ಷಣಕ್ಕೆ ಸಿಬಿಐ ನ್ಯಾಯಾಲಯದಿಂದ ಜಾಮೀನು ಸಿಗುವುದಿಲ್ಲ. ಹೀಗಾಗಿ ಸೋಮವಾರ ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ಸಲ್ಲಿಸಲಾಗುವುದು ಎಂದು ಲಾಲು ಪರ ವಕೀಲರು ತಿಳಿಸಿದರು.</p>.<p>ತಮ್ಮ ಕಕ್ಷಿದಾರರ ವಯಸ್ಸು (69 ವರ್ಷ) ಮತ್ತು ಆರೋಗ್ಯ ಗಮನದಲ್ಲಿರಿಸಿಕೊಂಡು ಮೂರು ವರ್ಷ ಅಥವಾ ಅದಕ್ಕಿಂತ ಕಡಿಮೆ ಅವಧಿಯ ಶಿಕ್ಷೆ ವಿಧಿಸುವಂತೆ ಇದಕ್ಕೂ ಮೊದಲು ಲಾಲು ಪರ ವಕೀಲರು ನ್ಯಾಯಾಧೀಶರಲ್ಲಿ ಮನವಿ ಮಾಡಿದರು.</p>.<p><strong>ಪ್ರಕರಣದ ಹಿನ್ನೆಲೆ</strong></p>.<p>2017ರ ಡಿ. 23ರಂದು ತೀರ್ಪು ಪ್ರಕಟಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯ, 22 ಆರೋಪಿಗಳ ಪೈಕಿ ಲಾಲು ಸೇರಿದಂತೆ 16 ಮಂದಿಯನ್ನು ತಪ್ಪಿತಸ್ಥರು ಎಂದು ಘೋಷಿಸಿತ್ತು.</p>.<p>ಬಿಹಾರದ ಮಾಜಿ ಮುಖ್ಯಮಂತ್ರಿ ಡಾ. ಜಗನ್ನಾಥ್ ಮಿಶ್ರಾ ಸೇರಿದಂತೆ ಆರು ಮಂದಿಯನ್ನು ಖುಲಾಸೆಗೊಳಿಸಿತ್ತು.</p>.<p>ಬಿಹಾರದ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಮತ್ತು ಆರು ಮಂದಿ ನಿವೃತ್ತ ಅಧಿಕಾರಿಗಳು ಭಾಗಿಯಾಗಿದ್ದ ಈ ಪ್ರಕರಣ ದೇಶದ ಗಮನ ಸೆಳೆದಿತ್ತು.</p>.<p><strong>ಹೈಕೋರ್ಟ್ಗೆ ಮೊರೆ: ತೇಜಸ್ವಿ</strong></p>.<p>ಪಟ್ನಾದಲ್ಲಿ ಪಕ್ಷದ ನಾಯಕರ ಜತೆ ತುರ್ತುಸಭೆ ನಡೆಸಿದ ಲಾಲು ಕಿರಿಯ ಪುತ್ರ ತೇಜಸ್ವಿ ಯಾದವ್, ಜಾಮೀನು ಕೋರಿ ಜಾರ್ಖಂಡ್ ಹೈಕೋರ್ಟ್ನಲ್ಲಿ ಸೋಮವಾರ ಅರ್ಜಿ ಸಲ್ಲಿಸುವುದಾಗಿ ಹೇಳಿದರು.</p>.<p>‘ಲಾಲು ಅವರೊಬ್ಬರೇ ಭ್ರಷ್ಟರು ಎಂದು ಬಿಂಬಿಸುವ ಯತ್ನ ನಡೆಯುತ್ತಿದೆ. ಬಿಹಾರದಲ್ಲಿ ನಡೆದ ₹1000 ಕೋಟಿಗಳ ಸೃಜನ್ ಹಗರಣದ ಬಗ್ಗೆ ಏಕೆ ಯಾರೂ ಚಕಾರ ಎತ್ತುತ್ತಿಲ್ಲ’ ಎಂದು ಅವರು ಪ್ರಶ್ನಿಸಿದರು.</p>.<p><strong>ಷಡ್ಯಂತ್ರಕ್ಕೆ ಬಲಿ: ಆರ್ಜೆಡಿ ಟೀಕೆ</strong></p>.<p>‘ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಬಿಜೆಪಿಯ ಷಡ್ಯಂತ್ರಕ್ಕೆ ಲಾಲು ಪ್ರಸಾದ್ ಬಲಿಯಾಗಿದ್ದಾರೆ’ ಎಂದು ಆರ್ಜೆಡಿ ಆರೋಪಿಸಿದೆ.</p>.<p>‘ದೇಶ ಕೊಳ್ಳೆ ಹೊಡೆದವರು ಎಂತಹ ದೊಡ್ಡ ವ್ಯಕ್ತಿಯಾದರೂ ನ್ಯಾಯ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನ್ಯಾಯದ ಎದುರು ಎಲ್ಲರೂ ಸಮಾನರು’ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ.</p>.<p>‘ಲಾಲು ಪ್ರಸಾದ್ ನಾಯಕತ್ವದಲ್ಲಿ ಆರಂಭವಾಗಿದ್ದ ಭ್ರಷ್ಟಾಚಾರ ರಾಜಕಾರಣದ ಅಧ್ಯಾಯಕ್ಕೆ ಇದರೊಂದಿಗೆ ತೆರೆ ಬಿದ್ದಿದೆ’ ಎಂದು ಜೆಡಿಯು ಹೇಳಿದೆ.</p>.<p>‘ಕಾಂಗ್ರೆಸ್ ಯಾವಾಗಲೂ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದೆ. ಆರ್ಜೆಡಿಯೊಂದಿಗೆ ನಾವು ಮೈತ್ರಿ ಮಾಡಿದ್ದೇವೆ ವಿನಾ ನಿರ್ದಿಷ್ಟ ವ್ಯಕ್ತಿಯೊಂದಿಗೆ ಅಲ್ಲ’ ಎಂದು ಕಾಂಗ್ರೆಸ್ ಹೇಳಿದೆ.</p>.<p><strong>ಮೊದಲ ಪ್ರಕರಣದಲ್ಲಿ ಐದು ವರ್ಷ ಜೈಲು</strong></p>.<p>ಮೇವು ಹಗರಣದ ಮೊದಲ ಪ್ರಕರಣದಲ್ಲಿ (ಆರ್ಸಿ 20ಎ/96) 2013ರ ಸೆಪ್ಟೆಂಬರ್ 13ರಂದು ನ್ಯಾಯಾಲಯ ಲಾಲು ಪ್ರಸಾದ್ ಅವರಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.</p>.<p>ಇದರಿಂದಾಗಿ ಲೋಕಸಭಾ ಸದಸ್ವತ್ವ ಕಳೆದುಕೊಂಡಿದ್ದ ಅವರು, ಮೂರು ತಿಂಗಳಲ್ಲೇ ಸುಪ್ರೀಂ ಕೋರ್ಟ್ನಿಂದ ಜಾಮೀನು ಪಡೆದಿದ್ದರು.</p>.<p><strong>ಬಾಕಿ ಇರುವ ಪ್ರಕರಣ</strong></p>.<p>* ದುಮಕಾ ಖಜಾನೆಯಿಂದ ₹3.97 ಕೋಟಿ ಪಡೆದ ಪ್ರಕರಣ</p>.<p>* ಚಾಯೀಬಾಸಾ ಖಜಾನೆಯಿಂದ ₹36 ಕೋಟಿ ಬಳಸಿದ ಪ್ರಕರಣ</p>.<p>* ಡೋರಂಡಾ ಖಜಾನೆಯಿಂದ ₹184 ಕೋಟಿ ತೆಗೆದ ಪ್ರಕರಣ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>