ಮಂಗಳೂರು: ದೀಪಕ್ ಕೊಲೆ ಪ್ರಕರಣದಲ್ಲಿ ತನಿಖಾ ತಂಡದ ವಶದಲ್ಲಿರುವ ಇಬ್ಬರ ವಿಚಾರಣೆಯಿಂದ ಮಹತ್ವದ ಮಾಹಿತಿ ಕಲೆಹಾಕಿರುವ ಪೊಲೀಸರು, ಗುಂಡೇಟು ತಿಂದು ಆಸ್ಪತ್ರೆಯಲ್ಲಿರುವ ಹಂತಕರಾದ ಪಿಂಕಿ ನವಾಝ್ ಮತ್ತು ರಿಜ್ವಾನ್ ವಿಚಾರಣೆಗೆ ಕಾತರದಿಂದ ಕಾಯುತ್ತಿದ್ದಾರೆ.
ದಡ್ಡಿಗುರಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಇಬ್ಬರ ಕಾಲಿಗೂ ಗುಂಡೇಟುಗಳು ಬಿದ್ದಿದ್ದವು. ಬಂಧನದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಶಸ್ತ್ರಚಿಕಿತ್ಸೆ ನಡೆಸಿ ಗುಂಡುಗಳನ್ನು ಹೊರತೆಗೆಯಲಾಗಿದೆ.
ಶನಿವಾರ ಈ ಕುರಿತು ಪ್ರತಿಕ್ರಿಯಿಸಿದ ನಗರ ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್, ‘ಪಿಂಕಿ ನವಾಝ್ ಮತ್ತು ರಿಜ್ವಾನ್ರನ್ನು ಶನಿವಾರ ವಾರ್ಡ್ಗೆ ಸ್ಥಳಾಂತರ ಮಾಡಲಾಗಿದೆ ಎಂದರು.