ಕೇಂದ್ರ ತಂಡದಿಂದ ಪರಿಶೀಲನೆ: ದಾಸರಹಳ್ಳಿಯಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನಿಯೋಜಿಸಿರುವ ತಜ್ಞರ ತಂಡವು ಪರಿಶೀಲಿಸಿತು. ಅಲ್ಲದೆ, ಮನೆಗಳ ಸದಸ್ಯರನ್ನು ಭೇಟಿ ಮಾಡಿತು. ಅಗ್ರಹಾರ ಬಡಾ
ವಣೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕಾಡುಗೊಂಡನಹಳ್ಳಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ವೈದ್ಯಕೀಯ ಅಧಿಕಾರಿಯಿಂದ ಮಾಹಿತಿ ಪಡೆಯಿತು.