<p><strong>ಹೊಸಕೋಟೆ:</strong> ಮಹಾರಾಷ್ಟ್ರದಲ್ಲಿ ಕೋರೆಗಾಂವ್ ವಿಜಯೋತ್ಸವ ಆಚರಿಸುತ್ತಿದ್ದ ದಲಿತರ ಮೇಲೆ ಸಂಘ ಪರಿವಾರ ನಡೆಸಿದ ದೌರ್ಜನ್ಯವನ್ನು ವಿರೋಧಿಸಿ ತಾಲ್ಲೂಕಿನ ಪ್ರಗತಿ ಪರ ದಲಿತ ಸಂಘಟನೆಗಳ ಒಕ್ಕೂಟ ಮತ್ತು ಯುವಶಕ್ತಿ ಸೇನೆ ಸದಸ್ಯರು ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಪ್ರವಾಸಿ ಮಂದಿರದಿಂದ ತಾಲ್ಲೂಕು ಕಚೇರಿವರೆಗೂ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ‘ಕೃತ್ಯಕ್ಕೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂಬ ಮನವಿಯನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು.</p>.<p>‘ದೇಶದಲ್ಲಿ ದಲಿತರನ್ನು ತುಳಿಯುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಈ ಸಂಚಿನ ಬಗ್ಗೆ ಮಹಾರಾಷ್ಟ್ರ ಸರ್ಕಾರಕ್ಕೆ ಮಾಹಿತಿ ಇದ್ದರೂ ಅದನ್ನು ತಡೆಯುವಲ್ಲಿ ವಿಫಲವಾಗಿದೆ’ ಎಂದರು.</p>.<p>‘ಕೃತ್ಯ ನಡೆಸಿದ ಹಿಂದೂ ಸಂಘಟನೆಯನ್ನು ನಿಷೇಧಿಸಿ ಹಾಗೂ ಕೃತ್ಯಕ್ಕೆ ಪ್ರಚೋದನೆ ನೀಡಿದವರನ್ನು ಗಡೀಪಾರು ಮಾಡಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.</p>.<p>ಯುವಶಕ್ತಿ ಸೇನೆ ಅಧ್ಯಕ್ಷ ವೈ.ಎಸ್ .ಎಂ.ಮಂಜುನಾಥ್, ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಪಿ.ಚಿನ್ನಸ್ವಾಮಿ ಪ್ರತಿಭಟನೆ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ:</strong> ಮಹಾರಾಷ್ಟ್ರದಲ್ಲಿ ಕೋರೆಗಾಂವ್ ವಿಜಯೋತ್ಸವ ಆಚರಿಸುತ್ತಿದ್ದ ದಲಿತರ ಮೇಲೆ ಸಂಘ ಪರಿವಾರ ನಡೆಸಿದ ದೌರ್ಜನ್ಯವನ್ನು ವಿರೋಧಿಸಿ ತಾಲ್ಲೂಕಿನ ಪ್ರಗತಿ ಪರ ದಲಿತ ಸಂಘಟನೆಗಳ ಒಕ್ಕೂಟ ಮತ್ತು ಯುವಶಕ್ತಿ ಸೇನೆ ಸದಸ್ಯರು ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಪ್ರವಾಸಿ ಮಂದಿರದಿಂದ ತಾಲ್ಲೂಕು ಕಚೇರಿವರೆಗೂ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ‘ಕೃತ್ಯಕ್ಕೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂಬ ಮನವಿಯನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು.</p>.<p>‘ದೇಶದಲ್ಲಿ ದಲಿತರನ್ನು ತುಳಿಯುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಈ ಸಂಚಿನ ಬಗ್ಗೆ ಮಹಾರಾಷ್ಟ್ರ ಸರ್ಕಾರಕ್ಕೆ ಮಾಹಿತಿ ಇದ್ದರೂ ಅದನ್ನು ತಡೆಯುವಲ್ಲಿ ವಿಫಲವಾಗಿದೆ’ ಎಂದರು.</p>.<p>‘ಕೃತ್ಯ ನಡೆಸಿದ ಹಿಂದೂ ಸಂಘಟನೆಯನ್ನು ನಿಷೇಧಿಸಿ ಹಾಗೂ ಕೃತ್ಯಕ್ಕೆ ಪ್ರಚೋದನೆ ನೀಡಿದವರನ್ನು ಗಡೀಪಾರು ಮಾಡಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.</p>.<p>ಯುವಶಕ್ತಿ ಸೇನೆ ಅಧ್ಯಕ್ಷ ವೈ.ಎಸ್ .ಎಂ.ಮಂಜುನಾಥ್, ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಪಿ.ಚಿನ್ನಸ್ವಾಮಿ ಪ್ರತಿಭಟನೆ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>