ಮಂಗಳೂರು: ‘ಕುದುರೆಮುಖ ಕಬ್ಬಿಣ ಅದಿರು ಕಂಪೆನಿಯ (ಕೆಐಒಸಿಎಲ್) ಅಧುನೀಕರಣ ಹಾಗೂ ವಿಸ್ತರಣಾ ಚಟುವಟಿಕೆಗಾಗಿ ಕೇಂದ್ರ ಸರ್ಕಾರ ₹200 ಕೋಟಿ ಮಂಜೂರು ಮಾಡಿದ್ದು, ಶೀಘ್ರದಲ್ಲಿಯೇ ಮಂಗಳೂರು ಘಟಕದಲ್ಲಿ ಮತ್ತೆ ಕಬ್ಬಿಣದ ಉಂಡೆ ತಯಾರಿಕೆ ಹಾಗೂ ಮೆದು ಕಬ್ಬಿಣ ತಯಾರಿಕೆ ಆರಂಭವಾಗಲಿದೆ’ ಎಂದು ಕೇಂದ್ರ ಉಕ್ಕು ಖಾತೆ ರಾಜ್ಯ ಸಚಿವ ಚೌಧರಿ ಬೀರೇಂದ್ರ ಸಿಂಗ್ ತಿಳಿಸಿದರು. ಶನಿವಾರ ನಗರದ ಕೆಐಒಸಿಎಲ್ ಘಟಕಕ್ಕೆ ಭೇಟಿ ನೀಡಿ, ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.