<p><strong>ರಾಯಚೂರು: </strong>ಸರ್ಕಾರಿ ಜಮೀನು ಹಾಗೂ ಕೆರೆಗಳ ರಕ್ಷಣೆ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದ್ದು, ಒತ್ತುವರಿ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು ಎಂದು ಕರ್ನಾಟಕ ಸಾರ್ವಜನಿಕ ಜಮೀನುಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕ ಇಂದ್ರೇಶ ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಕಲಬುರ್ಗಿ ವಿಭಾಗದ ಸರ್ಕಾರಿ ಜಮೀನುಗಳ ನ್ಯಾಯಾಲಯ ಪ್ರಕರಣಗಳ ಮತ್ತು ಸರ್ಕಾರಿ ಜಮೀನು ಒತ್ತುವರಿ ತೆರವು ಕುರಿತ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.</p>.<p>ಸರ್ಕಾರಿ ಜಮೀನು ಒತ್ತುವರಿ ಪ್ರಕರಣಗಳನ್ನು ತ್ವರಿತವಾಗಿ ಬಗೆಹರಿಸುವ ಸಲುವಾಗಿ ಸಿವಿಲ್ ನ್ಯಾಯಾಲಯದಲ್ಲಿ ಇರುವ ಪ್ರಕರಣಗಳನ್ನು ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಬೇಕು ಎಂದು ಸೂಚಿಸಿದರು.</p>.<p>ಸರ್ಕಾರಿ ಜಮೀನುಗಳ ಒತ್ತವರಿ ತೆರವುಗೊಳಿಸುವಲ್ಲಿ ಅಧಿಕಾರಿಗಳು ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಸಾಧಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಸರಿಯಾದ ಮಾಹಿತಿಗಳು ಹಾಗೂ ದಾಖಲೆಗಳು ಒದಗಿಸುವಲ್ಲಿ ಕೂಡ ಅಧಿಕಾರಿಗಳು ಎಡವುತ್ತಿದ್ದಾರೆ ಎಂದರು.</p>.<p>ಇದೇ ತಿಂಗಳು 17ರಂದು ನಿಗಮದ ಕಚೇರಿಯಲ್ಲಿ ನಡೆಯುವ ಸಭೆಗೆ ಸಮರ್ಪಕವಾದ ಮಾಹಿತಿಯೊಂದಿಗೆ ಅಧಿಕಾರಿಗಳು ಬರಬೇಕು. ಇಂತಹ ಪ್ರಕರಣಗಳನ್ನು ವಿಳಂಬ ಮಾಡಲು ಅವಕಾಶ ನೀಡಬಾರದು ಎಂದು ಎಚ್ಚರಿಸಿದರು.</p>.<p>ಸರ್ಕಾರಿ ವಕೀಲರಿಗೆ ಸರಿಯಾಗಿ ಮಾಹಿತಿ ಒದಗಿಸಿ, ಪ್ರಕರಣಗಳನ್ನು ನಿಭಾಯಿಸಬೇಕು. ಕೆರೆಗಳ ಮಾಹಿತಿಯನ್ನು ಸಂಗ್ರಹಿಸಿ, ಒತ್ತುವರಿಯಾಗಿರುವುದನ್ನು ಗುರುತಿಸಿ ಕ್ರಮ ವಹಿಸಬೇಕು ಎಂದರು. ನಿಗಮದ ಅಧಿಕಾರಿ ನಾಗರಾಜ ಹಾಗೂ ಕಲಬುರ್ಗಿ ವಿಭಾಗದ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಸರ್ಕಾರಿ ಜಮೀನು ಹಾಗೂ ಕೆರೆಗಳ ರಕ್ಷಣೆ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದ್ದು, ಒತ್ತುವರಿ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು ಎಂದು ಕರ್ನಾಟಕ ಸಾರ್ವಜನಿಕ ಜಮೀನುಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕ ಇಂದ್ರೇಶ ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಕಲಬುರ್ಗಿ ವಿಭಾಗದ ಸರ್ಕಾರಿ ಜಮೀನುಗಳ ನ್ಯಾಯಾಲಯ ಪ್ರಕರಣಗಳ ಮತ್ತು ಸರ್ಕಾರಿ ಜಮೀನು ಒತ್ತುವರಿ ತೆರವು ಕುರಿತ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.</p>.<p>ಸರ್ಕಾರಿ ಜಮೀನು ಒತ್ತುವರಿ ಪ್ರಕರಣಗಳನ್ನು ತ್ವರಿತವಾಗಿ ಬಗೆಹರಿಸುವ ಸಲುವಾಗಿ ಸಿವಿಲ್ ನ್ಯಾಯಾಲಯದಲ್ಲಿ ಇರುವ ಪ್ರಕರಣಗಳನ್ನು ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಬೇಕು ಎಂದು ಸೂಚಿಸಿದರು.</p>.<p>ಸರ್ಕಾರಿ ಜಮೀನುಗಳ ಒತ್ತವರಿ ತೆರವುಗೊಳಿಸುವಲ್ಲಿ ಅಧಿಕಾರಿಗಳು ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಸಾಧಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಸರಿಯಾದ ಮಾಹಿತಿಗಳು ಹಾಗೂ ದಾಖಲೆಗಳು ಒದಗಿಸುವಲ್ಲಿ ಕೂಡ ಅಧಿಕಾರಿಗಳು ಎಡವುತ್ತಿದ್ದಾರೆ ಎಂದರು.</p>.<p>ಇದೇ ತಿಂಗಳು 17ರಂದು ನಿಗಮದ ಕಚೇರಿಯಲ್ಲಿ ನಡೆಯುವ ಸಭೆಗೆ ಸಮರ್ಪಕವಾದ ಮಾಹಿತಿಯೊಂದಿಗೆ ಅಧಿಕಾರಿಗಳು ಬರಬೇಕು. ಇಂತಹ ಪ್ರಕರಣಗಳನ್ನು ವಿಳಂಬ ಮಾಡಲು ಅವಕಾಶ ನೀಡಬಾರದು ಎಂದು ಎಚ್ಚರಿಸಿದರು.</p>.<p>ಸರ್ಕಾರಿ ವಕೀಲರಿಗೆ ಸರಿಯಾಗಿ ಮಾಹಿತಿ ಒದಗಿಸಿ, ಪ್ರಕರಣಗಳನ್ನು ನಿಭಾಯಿಸಬೇಕು. ಕೆರೆಗಳ ಮಾಹಿತಿಯನ್ನು ಸಂಗ್ರಹಿಸಿ, ಒತ್ತುವರಿಯಾಗಿರುವುದನ್ನು ಗುರುತಿಸಿ ಕ್ರಮ ವಹಿಸಬೇಕು ಎಂದರು. ನಿಗಮದ ಅಧಿಕಾರಿ ನಾಗರಾಜ ಹಾಗೂ ಕಲಬುರ್ಗಿ ವಿಭಾಗದ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>