ತಾಲ್ಲೂಕು ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಇತಿಹಾಸ ಪ್ರಸಿದ್ಧ ಮಹದೇಶ್ವರ ದೇವಸ್ಥಾನ ಹಾಗೂ ಅಂಬೇಡ್ಕರ್ ಭವನ ಕಳೆದ ಹತ್ತು ಹನ್ನೆರಡು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಕಾರ್ಮಿಕರ ಆಶಾಕಿರಣದಂತಿದ್ದ ಸ್ಪನ್ ಸಿಲ್ಕ್ ಮಿಲ್ ಸ್ಥಗಿತಗೊಂಡು ಹಲವು ವರ್ಷಗಳೇ ಕಳೆದಿದೆ. ಅಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು, ಅವರ ಕುಟುಂಬ ಬೀದಿಗೆ ಬಿದ್ದಿದೆ. ಇದಷ್ಟೇ ಅಲ್ಲದೇ ನೂರಾರು ಸಮಸ್ಯೆಗಳ ಸರಮಾಲೆಯನ್ನು ತಾಲ್ಲೂಕು ಹೊದ್ದು ಕುಳಿದಿದೆ. ಇದರ ಬಗ್ಗೆ ಗಮನ ಹರಿಸಬೇಕಿದೆ. ಇದನ್ನು ಬಿಟ್ಟು ಕೀಳುಮಟ್ಟದ ಮಾತುಗಳನ್ನು ಆಡುವುದು ಅವರ ಕೀಳು ರಾಜಕಾರಣವನ್ನು ಎತ್ತಿ ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.