ಮಹದಾಯಿ ವಿಚಾರದಲ್ಲಿ ಗೋವಾ ಮುಖ್ಯಮಂತ್ರಿ ಪರ್ರೀಕರ್ ಅವರಿಂದ ಪತ್ರ ಬರೆಯಿಸಿಕೊಳ್ಳುವ ಮೂಲಕ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಯಾವ ನಾಟಕ ಕಂಪನಿಗಳಿಗೂ ಕಡಿಮೆ ಇಲ್ಲದಂತೆ ನಾಟಕ ಆಡಿದ್ದಾರೆ. ಮತ್ತೊಂದೆಡೆ ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ ಎಲ್ಲ ಸಂಸದರೂ ನಾಲಿಗೆಗೆ ಲಕ್ವ ಹೊಡೆಸಿಕೊಂಡವರಂತೆ ಮೌನ ವಹಿಸಿದ್ದಾರೆ. ಅವರಿಗೇನಾದರೂ ಇಲ್ಲಿನ ಜನರ ಬಗ್ಗೆ ಕಿಂಚಿತ್ತು ಕಾಳಜಿ ಇದ್ದರೆ ಇನ್ನಾದರೂ ಮೌನ ಮುರಿದು ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಲಿ ಎಂದು ಆಗ್ರಹಿಸಿದರು.