<p><strong>ಮಾಗಡಿ: </strong>ಇಲ್ಲಿನ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ದಲಿತ ಅಭ್ಯರ್ಥಿಗೆ ಬೆಂಬಲ ನೀಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಅಭ್ಯರ್ಥಿಯ ಬೆಂಬಲಿಗರು ಶಾಸಕ ಎಚ್.ಸಿ. ಬಾಲಕೃಷ್ಣರ ಕಾರಿಗೆ ಚಪ್ಪಲಿ ತೂರಿ, ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.</p>.<p>ಮಾದಿಗ ಸಮುದಾಯಕ್ಕೆ ಸೇರಿದ ಸುಶೀಲಾ ರಂಗಹನುಮಯ್ಯ ಅವರಿಗೆ ಅವಕಾಶ ನಿರಾಕರಿಸಿದ್ದರಿಂದ ಸಿಟ್ಟಿಗೆದ್ದ ಸುಶೀಲಾರ ಪತಿ ರಂಗಹನುಮಯ್ಯ ಹಾಗೂ ಅವರ ಬೆಂಬಲಿಗರು ಪುರಸಭೆ ಕಚೇರಿಯ ಮುಂದೆ ಅರೆಬೆತ್ತಲೆ ಪ್ರತಿಭಟನೆ ಆರಂಭಿಸಿದರು.</p>.<p>ಶಾಸಕ ಬಾಲಕೃಷ್ಣರ ಕಾರನ್ನು ಅಡ್ಡಗಟ್ಟಿ ಅದರ ಮೇಲಿನ ಹೂವಿನ ಹಾರಗಳನ್ನು ಕಿತ್ತೆಸೆದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಗುಂಪಿನಲ್ಲಿ ಒಬ್ಬರು ಶಾಸಕರ ಕಾರಿನ ಮೇಲೆ ಚಪ್ಪಲಿ ತೂರಿದರು. ಅದು ಕಾರಿನಿಂದ ಆಚೆಗೆ ಹೋಗಿ ಬಿತ್ತು. ಶಾಸಕರು ಅಲ್ಲಿಂದ ನಿರ್ಗಮಿಸಿದರು.</p>.<p>ಸ್ಥಳದಲ್ಲಿದ್ದ ಸಂಸದ ಡಿ.ಕೆ. ಸುರೇಶ್ ಅವರ ವಿರುದ್ಧವೂ ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಅವರ ಕಾರಿಗೆ ಅಡ್ಡಲಾಗಿ ಮಲಗಿ ಆಕ್ರೋಶ ವ್ಯಕ್ತಪಡಿಸಿದರು. ಸಚಿವರಾದ ಡಿ.ಕೆ. ಶಿವಕುಮಾರ್, ಎಚ್.ಎಂ. ರೇವಣ್ಣ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭ ಉದ್ರಿಕ್ತ ವಾತಾವರಣ ನಿರ್ಮಾಣವಾಗಿತ್ತು. ನಂತರದಲ್ಲಿ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು.</p>.<p>‘ಕಳೆದ ಬಾರಿಯೂ ನಮಗೆ ಅಧಿಕಾರ ಕೈತಪ್ಪಿದ್ದು, ಈ ಬಾರಿ ಅವಕಾಶ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಶಾಸಕ ಬಾಲಕೃಷ್ಣ ನುಡಿದಂತೆ ನಡೆದುಕೊಳ್ಳದೇ ಮೋಸ ಮಾಡಿದ್ದಾರೆ’ ಎಂದು ರಂಗಹನುಮಯ್ಯ ಆರೋಪಿಸಿದರು.</p>.<p>* * </p>.<p>ಸುಶೀಲಾ ಅವರಿಗೆ ಅನ್ಯಾಯ ಆಗಿರುವುದು ನಿಜ. ಆದರೆ ಕಾಂಗ್ರೆಸ್ನ ಎಲ್ಲ ಮುಖಂಡರ ಅಭಿಪ್ರಾಯದಂತೆ ಅಧ್ಯಕ್ಷ ಸ್ಥಾನಕ್ಕೆ ಮಂಜುನಾಥ್ ಅವರನ್ನು ಆಯ್ಕೆ ಮಾಡಲಾಯಿತು<br /> <strong>ಎಚ್.ಸಿ. ಬಾಲಕೃಷ್ಣ</strong><br /> ಶಾಸಕ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ: </strong>ಇಲ್ಲಿನ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ದಲಿತ ಅಭ್ಯರ್ಥಿಗೆ ಬೆಂಬಲ ನೀಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಅಭ್ಯರ್ಥಿಯ ಬೆಂಬಲಿಗರು ಶಾಸಕ ಎಚ್.ಸಿ. ಬಾಲಕೃಷ್ಣರ ಕಾರಿಗೆ ಚಪ್ಪಲಿ ತೂರಿ, ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.</p>.<p>ಮಾದಿಗ ಸಮುದಾಯಕ್ಕೆ ಸೇರಿದ ಸುಶೀಲಾ ರಂಗಹನುಮಯ್ಯ ಅವರಿಗೆ ಅವಕಾಶ ನಿರಾಕರಿಸಿದ್ದರಿಂದ ಸಿಟ್ಟಿಗೆದ್ದ ಸುಶೀಲಾರ ಪತಿ ರಂಗಹನುಮಯ್ಯ ಹಾಗೂ ಅವರ ಬೆಂಬಲಿಗರು ಪುರಸಭೆ ಕಚೇರಿಯ ಮುಂದೆ ಅರೆಬೆತ್ತಲೆ ಪ್ರತಿಭಟನೆ ಆರಂಭಿಸಿದರು.</p>.<p>ಶಾಸಕ ಬಾಲಕೃಷ್ಣರ ಕಾರನ್ನು ಅಡ್ಡಗಟ್ಟಿ ಅದರ ಮೇಲಿನ ಹೂವಿನ ಹಾರಗಳನ್ನು ಕಿತ್ತೆಸೆದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಗುಂಪಿನಲ್ಲಿ ಒಬ್ಬರು ಶಾಸಕರ ಕಾರಿನ ಮೇಲೆ ಚಪ್ಪಲಿ ತೂರಿದರು. ಅದು ಕಾರಿನಿಂದ ಆಚೆಗೆ ಹೋಗಿ ಬಿತ್ತು. ಶಾಸಕರು ಅಲ್ಲಿಂದ ನಿರ್ಗಮಿಸಿದರು.</p>.<p>ಸ್ಥಳದಲ್ಲಿದ್ದ ಸಂಸದ ಡಿ.ಕೆ. ಸುರೇಶ್ ಅವರ ವಿರುದ್ಧವೂ ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಅವರ ಕಾರಿಗೆ ಅಡ್ಡಲಾಗಿ ಮಲಗಿ ಆಕ್ರೋಶ ವ್ಯಕ್ತಪಡಿಸಿದರು. ಸಚಿವರಾದ ಡಿ.ಕೆ. ಶಿವಕುಮಾರ್, ಎಚ್.ಎಂ. ರೇವಣ್ಣ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭ ಉದ್ರಿಕ್ತ ವಾತಾವರಣ ನಿರ್ಮಾಣವಾಗಿತ್ತು. ನಂತರದಲ್ಲಿ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು.</p>.<p>‘ಕಳೆದ ಬಾರಿಯೂ ನಮಗೆ ಅಧಿಕಾರ ಕೈತಪ್ಪಿದ್ದು, ಈ ಬಾರಿ ಅವಕಾಶ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಶಾಸಕ ಬಾಲಕೃಷ್ಣ ನುಡಿದಂತೆ ನಡೆದುಕೊಳ್ಳದೇ ಮೋಸ ಮಾಡಿದ್ದಾರೆ’ ಎಂದು ರಂಗಹನುಮಯ್ಯ ಆರೋಪಿಸಿದರು.</p>.<p>* * </p>.<p>ಸುಶೀಲಾ ಅವರಿಗೆ ಅನ್ಯಾಯ ಆಗಿರುವುದು ನಿಜ. ಆದರೆ ಕಾಂಗ್ರೆಸ್ನ ಎಲ್ಲ ಮುಖಂಡರ ಅಭಿಪ್ರಾಯದಂತೆ ಅಧ್ಯಕ್ಷ ಸ್ಥಾನಕ್ಕೆ ಮಂಜುನಾಥ್ ಅವರನ್ನು ಆಯ್ಕೆ ಮಾಡಲಾಯಿತು<br /> <strong>ಎಚ್.ಸಿ. ಬಾಲಕೃಷ್ಣ</strong><br /> ಶಾಸಕ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>