ಹೊಸಪೇಟೆ: ರಾಜ್ಯದಲ್ಲಿ ಕ್ರಿಮಿನಲ್ ಚಟುವಟಿಕೆಗಳು ಹೆಚ್ಚಾಗಿವೆ. ಸುಳ್ಳು ಕಥೆಗಳನ್ನು ಕಟ್ಟಿ ನುಣುಚಿಕೊಳ್ಳುತ್ತಿರುವುದು ಸರಿಯಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಇದರ ಮೇಲೆ ನಿಗಾ ವಹಿಸಬೇಕು. ತಡೆಯಲು ಆಗದಿದ್ದರೆ ಅಧಿಕಾರದಲ್ಲಿ ಏಕಿರಬೇಕು ಎಂದು ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆ ರಾಜ್ಯ ಸಚಿವ ರಮೇಶ ಜಿಗಜಿಣಗಿ ಹೇಳಿದರು.