<p><strong>ವಿಜಯಪುರ: </strong>ರೇಷ್ಮೆ ಕೃಷಿಯಲ್ಲಿ ಕೂಲಿಯಾಳುಗಳ ಸಮಸ್ಯೆ ನಿವಾರಣೆಗಾಗಿ ಯಂತ್ರಗಳ ಖರೀದಿಗಾಗಿ ಸರ್ಕಾರ ನೀಡುತ್ತಿರುವ ಸಹಾಯಧನದ ಪ್ರಮಾಣವನ್ನು ಶೇ 90 ಕ್ಕೆ ಏರಿಕೆ ಮಾಡಬೇಕು ಎಂದು ರೈತ ಸಂಘದ ಅಧ್ಯಕ್ಷ ಮಂಡಿಬೆಲೆ ನಾರಾಯಣಸ್ವಾಮಿ ಒತ್ತಾಯಿಸಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೇಷ್ಮೆ ಹಿಪ್ಪುನೇರಳೆ ಸೊಪ್ಪಿನ ಕಟಾವು ಮಾಡುವ ರೀಪರ್ ಯಂತ್ರದಿಂದ ಕೂಲಿಯಾಳುಗಳ ಕೊರತೆಯನ್ನು ನೀಗಿಸಲು ಸಹಕಾರಿಯಾಗಲಿದೆ. ರೇಷ್ಮೆ ಬೆಳೆಗಾರರಿಗೆ ಸಮಯ, ಹಣದ ಉಳಿತಾಯ ಮತ್ತು ಕೂಲಿ ಕಾರ್ಮಿಕರ ಸಮಸ್ಯೆ ಬಗೆಹರಿಯಲಿದೆ. ಈ ಕುರಿತು ಇಲಾಖೆಯ ಸಚಿವರೊಂದಿಗೆ ಚರ್ಚೆ ನಡೆಸಲಾಗಿದ್ದು ರೈತರ ಬೇಡಿಕೆಗೆ ಸ್ಪಂದಿಸಬೇಕು ಎಂದರು.</p>.<p>ಈ ರೀಪರ್ ಯಂತ್ರವನ್ನು ಕೇರಳ ಸರ್ಕಾರಿ ಸಂಸ್ಥೆ ಅಭಿವೃದ್ಧಿ ಪಡಿಸಿದೆ. ಅಲ್ಲಿ ಈ ಯಂತ್ರವನ್ನು ಗೋದಿ, ರಾಗಿ, ಭತ್ತ, ಜೋಳ, ಸೋಯಾ ಬೆಳೆ ಕತ್ತರಿಸಲು ಬಳಕೆ ಮಾಡಲಾಗುತ್ತಿದೆ. ಭತ್ತ ಮತ್ತು ಸಾದಲಿ ಸುತ್ತಮುತ್ತ ರಾಗಿ ಕಟಾವಿಗೆ ಬಳಸುತ್ತಿದ್ದಾರೆ. ಇದನ್ನು ಕೊಂಚ ಮಾರ್ಪಾಟು ಮಾಡಿದಲ್ಲಿ ರೇಷ್ಮೆ ಬೆಳೆಗಾರರ ಬಹುತೇಕ ಶ್ರಮ ಕಡಿಮೆಯಾಗುತ್ತದೆ ಎಂದರು.</p>.<p>ಇಪ್ಪತ್ತು ಮಂದಿ ಕಾರ್ಮಿಕರು ಮಾಡಬೇಕಾದ ಕೆಲಸವನ್ನು ಒಬ್ಬ ವ್ಯಕ್ತಿ ಈ ಯಂತ್ರವನ್ನು ಬಳಸಿ ಮಾಡಬಹುದು. ನಾಲ್ಕನೇ ಜ್ವರದ ರೇಷ್ಮೆ ಹುಳುವಿಗೆ ಹಾಕಲು ಹಿಪ್ಪುನೇರಳೆ ಸೊಪ್ಪಿನ ದಪ್ಪಕಡ್ಡಿಗಳನ್ನು ಕತ್ತರಿಸಲು ಸಾಕಷ್ಟು ಶ್ರಮ ಬೇಕಾಗುತ್ತದೆ. ಅಲ್ಲದೆ ಕೂಲಿ ಕಾರ್ಮಿಕರ ಸಮಸ್ಯೆಯಿಂದ ತತ್ತರಿಸಿರುವ ರೇಷ್ಮೆ ಬೆಳೆಗಾರರಿಗೆ ಇದು ವರದಾನವಾಗಲಿದೆ ಎಂದರು.</p>.<p>ರೈತ ಮುಖಂಡ ದೇವರಾಜಪ್ಪ ಮಾತನಾಡಿ, ₹ 1.99 ಕೋಟಿಯ ಈ ಯಂತ್ರಕ್ಕೆ ಈಗ ಕೃಷಿ ಇಲಾಖೆಯಿಂದ ₹ 48,500 ಸಹಾಯಧನ ಸಿಗುತ್ತಿದೆ. ರೇಷ್ಮೆ ಇಲಾಖೆಯ ಅಧಿಕಾರಿಗಳು ಹಾಗೂ ಸಚಿವರು ಸಹಾಯಧನವನ್ನು ಶೇ 90ಕ್ಕೆ ಹೆಚ್ಚಿಸಲು ಒತ್ತಾಯಿಸಿದ್ದೇವೆ. ಸಿಗುವ ಆಶಾಭಾವನೆಯಿದೆ. ಸುಲಭವಾಗಿ ಬಳಸಬಹುದಾದ ಈ ಯಂತ್ರವನ್ನು ಹಿಪ್ಪುನೇರಳೆ ಕಟಾವಲ್ಲದೆ, ರಾಗಿ, ಜೋಳವನ್ನು ಕತ್ತರಿಸಲೂ ಬಳಕೆ ಮಾಡಿಕೊಳ್ಳಬಹುದು. ತಂತ್ರಜ್ಞಾನದ ಬಳಕೆ ಅವಶ್ಯಕತೆಯಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ರೇಷ್ಮೆ ಕೃಷಿಯಲ್ಲಿ ಕೂಲಿಯಾಳುಗಳ ಸಮಸ್ಯೆ ನಿವಾರಣೆಗಾಗಿ ಯಂತ್ರಗಳ ಖರೀದಿಗಾಗಿ ಸರ್ಕಾರ ನೀಡುತ್ತಿರುವ ಸಹಾಯಧನದ ಪ್ರಮಾಣವನ್ನು ಶೇ 90 ಕ್ಕೆ ಏರಿಕೆ ಮಾಡಬೇಕು ಎಂದು ರೈತ ಸಂಘದ ಅಧ್ಯಕ್ಷ ಮಂಡಿಬೆಲೆ ನಾರಾಯಣಸ್ವಾಮಿ ಒತ್ತಾಯಿಸಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೇಷ್ಮೆ ಹಿಪ್ಪುನೇರಳೆ ಸೊಪ್ಪಿನ ಕಟಾವು ಮಾಡುವ ರೀಪರ್ ಯಂತ್ರದಿಂದ ಕೂಲಿಯಾಳುಗಳ ಕೊರತೆಯನ್ನು ನೀಗಿಸಲು ಸಹಕಾರಿಯಾಗಲಿದೆ. ರೇಷ್ಮೆ ಬೆಳೆಗಾರರಿಗೆ ಸಮಯ, ಹಣದ ಉಳಿತಾಯ ಮತ್ತು ಕೂಲಿ ಕಾರ್ಮಿಕರ ಸಮಸ್ಯೆ ಬಗೆಹರಿಯಲಿದೆ. ಈ ಕುರಿತು ಇಲಾಖೆಯ ಸಚಿವರೊಂದಿಗೆ ಚರ್ಚೆ ನಡೆಸಲಾಗಿದ್ದು ರೈತರ ಬೇಡಿಕೆಗೆ ಸ್ಪಂದಿಸಬೇಕು ಎಂದರು.</p>.<p>ಈ ರೀಪರ್ ಯಂತ್ರವನ್ನು ಕೇರಳ ಸರ್ಕಾರಿ ಸಂಸ್ಥೆ ಅಭಿವೃದ್ಧಿ ಪಡಿಸಿದೆ. ಅಲ್ಲಿ ಈ ಯಂತ್ರವನ್ನು ಗೋದಿ, ರಾಗಿ, ಭತ್ತ, ಜೋಳ, ಸೋಯಾ ಬೆಳೆ ಕತ್ತರಿಸಲು ಬಳಕೆ ಮಾಡಲಾಗುತ್ತಿದೆ. ಭತ್ತ ಮತ್ತು ಸಾದಲಿ ಸುತ್ತಮುತ್ತ ರಾಗಿ ಕಟಾವಿಗೆ ಬಳಸುತ್ತಿದ್ದಾರೆ. ಇದನ್ನು ಕೊಂಚ ಮಾರ್ಪಾಟು ಮಾಡಿದಲ್ಲಿ ರೇಷ್ಮೆ ಬೆಳೆಗಾರರ ಬಹುತೇಕ ಶ್ರಮ ಕಡಿಮೆಯಾಗುತ್ತದೆ ಎಂದರು.</p>.<p>ಇಪ್ಪತ್ತು ಮಂದಿ ಕಾರ್ಮಿಕರು ಮಾಡಬೇಕಾದ ಕೆಲಸವನ್ನು ಒಬ್ಬ ವ್ಯಕ್ತಿ ಈ ಯಂತ್ರವನ್ನು ಬಳಸಿ ಮಾಡಬಹುದು. ನಾಲ್ಕನೇ ಜ್ವರದ ರೇಷ್ಮೆ ಹುಳುವಿಗೆ ಹಾಕಲು ಹಿಪ್ಪುನೇರಳೆ ಸೊಪ್ಪಿನ ದಪ್ಪಕಡ್ಡಿಗಳನ್ನು ಕತ್ತರಿಸಲು ಸಾಕಷ್ಟು ಶ್ರಮ ಬೇಕಾಗುತ್ತದೆ. ಅಲ್ಲದೆ ಕೂಲಿ ಕಾರ್ಮಿಕರ ಸಮಸ್ಯೆಯಿಂದ ತತ್ತರಿಸಿರುವ ರೇಷ್ಮೆ ಬೆಳೆಗಾರರಿಗೆ ಇದು ವರದಾನವಾಗಲಿದೆ ಎಂದರು.</p>.<p>ರೈತ ಮುಖಂಡ ದೇವರಾಜಪ್ಪ ಮಾತನಾಡಿ, ₹ 1.99 ಕೋಟಿಯ ಈ ಯಂತ್ರಕ್ಕೆ ಈಗ ಕೃಷಿ ಇಲಾಖೆಯಿಂದ ₹ 48,500 ಸಹಾಯಧನ ಸಿಗುತ್ತಿದೆ. ರೇಷ್ಮೆ ಇಲಾಖೆಯ ಅಧಿಕಾರಿಗಳು ಹಾಗೂ ಸಚಿವರು ಸಹಾಯಧನವನ್ನು ಶೇ 90ಕ್ಕೆ ಹೆಚ್ಚಿಸಲು ಒತ್ತಾಯಿಸಿದ್ದೇವೆ. ಸಿಗುವ ಆಶಾಭಾವನೆಯಿದೆ. ಸುಲಭವಾಗಿ ಬಳಸಬಹುದಾದ ಈ ಯಂತ್ರವನ್ನು ಹಿಪ್ಪುನೇರಳೆ ಕಟಾವಲ್ಲದೆ, ರಾಗಿ, ಜೋಳವನ್ನು ಕತ್ತರಿಸಲೂ ಬಳಕೆ ಮಾಡಿಕೊಳ್ಳಬಹುದು. ತಂತ್ರಜ್ಞಾನದ ಬಳಕೆ ಅವಶ್ಯಕತೆಯಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>