<p><strong>ಚಾಮರಾಜನಗರ:</strong> ‘ಆಶಾ ಕಾರ್ಯಕರ್ತೆ ಯರು ಗ್ರಾಮೀಣ ಆರೋಗ್ಯ ಸೇವೆಯಲ್ಲಿ ತೊಡಗಿಕೊಂಡು ಆರೋಗ್ಯ ಇಲಾಖೆ ಹಾಗೂ ಸಮುದಾಯದ ನಡುವೆ ಸೇತುವೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಎಂ.ಸಿ. ಮೋಹನಕುಮಾರಿ ಹೇಳಿದರು.</p>.<p>ನಗರದ ವಾಲ್ಮೀಕಿ ಭವನದಲ್ಲಿ ಶನಿವಾರ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹಾಗೂ ಎಐಟಿಯುಸಿಯಿಂದ ನಡೆದ ಆಶಾ ಕಾರ್ಯಕರ್ತೆಯರ ಜಿಲ್ಲಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ತಾಯಿ ಮಗುವಿನ ಆರೋಗ್ಯ, ಗರ್ಭಿಣಿಯರ ನೋಂದಣಿ, ರಕ್ತಹೀನತೆ ತಡೆಗಟ್ಟುವಿಕೆ, ಬಾಣಂತಿಯರಿಗೆ ಆಸ್ಪತ್ರೆ ಸೇವೆ ನೀಡಲು ಸಹಾಯ ಮಾಡುವುದು ಸೇರಿದಂತೆ ಆರೋಗ್ಯ ಇಲಾಖೆ ವ್ಯಾಪ್ತಿಯ 34 ಸೇವೆಗಳನ್ನು ಜನರಿಗೆ ತಲುಪಿಸಲು ಆಶಾ ಕಾರ್ಯಕರ್ತೆಯರು ಸಹಕಾರಿಯಾಗಿದ್ದಾರೆ ಎಂದು ತಿಳಿಸಿದರು.</p>.<p>ಜಿಲ್ಲೆಯಲ್ಲಿ 807 ಆಶಾ ಕಾರ್ಯಕರ್ತೆ ಯರು ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ನವೆಂಬರ್ 2017ರವರೆಗೆ ಈ ಪೈಕಿ ಕೇಂದ್ರ ಸರ್ಕಾರದಿಂದ ₹ 1.13 ಕೋಟಿ, ರಾಜ್ಯ ಸರ್ಕಾರದಿಂದ ₹ 1.92 ಕೋಟಿ ಸೇರಿದಂತೆ ಒಟ್ಟು ₹ 3.10 ಕೋಟಿ ವೇತನ ನೀಡಲಾಗಿದೆ. ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಮಾತ್ರ ಆಶಾ ಕಾರ್ಯಕರ್ತೆಯರಿಗೆ ₹ 3,500 ವೇತನ ನಿಗದಿಪಡಿಸಿದೆ ಎಂದು ವಿವರಿಸಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಚ್. ಪ್ರಸಾದ್ ಮಾತನಾಡಿ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 2005ರಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ಆರಂಭವಾಯಿತು. ಇವರ ಸಹಕಾರದಿಂದ ಆರೋಗ್ಯ ಸೇವೆಯನ್ನು ಗ್ರಾಮೀಣರು, ಗುಡ್ಡಗಾಡು ಪ್ರದೇಶ ಗಳಿಗೂ ತಲುಪಿಸಲು ಸಾಧ್ಯವಾಗಿದೆ ಎಂದರು.</p>.<p>ಜಿಲ್ಲೆಯು ಶೇ 40 ರಿಂದ 50ರಷ್ಟು ಅರಣ್ಯ ಪ್ರದೇಶದಿಂದ ಕೂಡಿದ್ದು, ಕಾಡಂಚಿನ ಪ್ರದೇಶಗಳಾದ ಬೇಡಗುಳಿ, ಗೋಪಿನಾಥಂ ಸೇರಿದಂತೆ ಇತರೆ ಪ್ರದೇಶದಲ್ಲಿ ಕಾರ್ಯಕರ್ತೆಯರು ಇಲ್ಲ. ಹಾಗಾಗಿ, ಈ ಪ್ರದೇಶದಲ್ಲಿ ಕಡಿಮೆ ವಿದ್ಯಾರ್ಹತೆ ಇದ್ದವರಿಗೂ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.</p>.<p>ಎಐಟಿಯುಸಿ ರಾಜ್ಯ ಕಾರ್ಯ ದರ್ಶಿ ಡಿ. ನಾಗಲಕ್ಷ್ಮಿ ಮಾತನಾಡಿ, ಆಶಾ ಕಾರ್ಯಕರ್ತೆಯರ ವೇತನ ನಿಗದಿಪಡಿಸಬೇಕು ಎಂದು 2017ರ ಸೆ. 7 ಮತ್ತು 8ರಂದು ಬೆಂಗಳೂರಿನಲ್ಲಿ ನಡೆಸಿದ ಹೋರಾಟದ ಯಶಸ್ಸಿಗೆ ಕಾರಣರಾದ ಕಾರ್ಯಕರ್ತೆಯರನ್ನು ಅಭಿನಂದಿಸುವ ಉದ್ದೇಶದಿಂದ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರದಲ್ಲಿ ಸಮಾವೇಶ ನಡೆಸಲಾಗುತ್ತಿದೆ ಎಂದು ತಿಳಿಸಿದರು.</p>.<p>ರಾಜ್ಯ ಸರ್ಕಾರದ ನಮ್ಮ ಹೋರಾಟಕ್ಕೆ ಸ್ಪಂದಿಸಿ ವೇತನ ನಿಗದಿಪಡಿಸಿರುವುದು ಶ್ಲಾಘನೀಯ. ಮುಂದಿನ ರಾಜ್ಯ ಬಜೆಟ್ನಲ್ಲಿ ವೇತನವನ್ನು ₹ 6,000 ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮನವಿ ಮಾಡಿದರು. ಸಮಾವೇಶದಲ್ಲಿ ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಎಂ.ಶಶಿಧರ್, ಜಿಲ್ಲಾ ಸಂಚಾಲಕ ಚಂದ್ರಶೇಖರ್ ಮೇಟಿ, ಜಿಲ್ಲಾ ಘಟಕದ ಅಧ್ಯಕ್ಷೆ ಕವಿತಾ ಹಾಜರಿದ್ದರು.</p>.<p>* * </p>.<p>ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಸಮಾಲೋಚನೆ ನಡೆಸಲಾಗುವುದು <strong>ಡಾ.ಎಂ.ಸಿ.ಮೋಹನಕುಮಾರಿ</strong><br /> ಜಿಲ್ಲಾ ಉಸ್ತುವಾರಿ ಸಚಿವೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ‘ಆಶಾ ಕಾರ್ಯಕರ್ತೆ ಯರು ಗ್ರಾಮೀಣ ಆರೋಗ್ಯ ಸೇವೆಯಲ್ಲಿ ತೊಡಗಿಕೊಂಡು ಆರೋಗ್ಯ ಇಲಾಖೆ ಹಾಗೂ ಸಮುದಾಯದ ನಡುವೆ ಸೇತುವೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಎಂ.ಸಿ. ಮೋಹನಕುಮಾರಿ ಹೇಳಿದರು.</p>.<p>ನಗರದ ವಾಲ್ಮೀಕಿ ಭವನದಲ್ಲಿ ಶನಿವಾರ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹಾಗೂ ಎಐಟಿಯುಸಿಯಿಂದ ನಡೆದ ಆಶಾ ಕಾರ್ಯಕರ್ತೆಯರ ಜಿಲ್ಲಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ತಾಯಿ ಮಗುವಿನ ಆರೋಗ್ಯ, ಗರ್ಭಿಣಿಯರ ನೋಂದಣಿ, ರಕ್ತಹೀನತೆ ತಡೆಗಟ್ಟುವಿಕೆ, ಬಾಣಂತಿಯರಿಗೆ ಆಸ್ಪತ್ರೆ ಸೇವೆ ನೀಡಲು ಸಹಾಯ ಮಾಡುವುದು ಸೇರಿದಂತೆ ಆರೋಗ್ಯ ಇಲಾಖೆ ವ್ಯಾಪ್ತಿಯ 34 ಸೇವೆಗಳನ್ನು ಜನರಿಗೆ ತಲುಪಿಸಲು ಆಶಾ ಕಾರ್ಯಕರ್ತೆಯರು ಸಹಕಾರಿಯಾಗಿದ್ದಾರೆ ಎಂದು ತಿಳಿಸಿದರು.</p>.<p>ಜಿಲ್ಲೆಯಲ್ಲಿ 807 ಆಶಾ ಕಾರ್ಯಕರ್ತೆ ಯರು ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ನವೆಂಬರ್ 2017ರವರೆಗೆ ಈ ಪೈಕಿ ಕೇಂದ್ರ ಸರ್ಕಾರದಿಂದ ₹ 1.13 ಕೋಟಿ, ರಾಜ್ಯ ಸರ್ಕಾರದಿಂದ ₹ 1.92 ಕೋಟಿ ಸೇರಿದಂತೆ ಒಟ್ಟು ₹ 3.10 ಕೋಟಿ ವೇತನ ನೀಡಲಾಗಿದೆ. ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಮಾತ್ರ ಆಶಾ ಕಾರ್ಯಕರ್ತೆಯರಿಗೆ ₹ 3,500 ವೇತನ ನಿಗದಿಪಡಿಸಿದೆ ಎಂದು ವಿವರಿಸಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಚ್. ಪ್ರಸಾದ್ ಮಾತನಾಡಿ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 2005ರಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ಆರಂಭವಾಯಿತು. ಇವರ ಸಹಕಾರದಿಂದ ಆರೋಗ್ಯ ಸೇವೆಯನ್ನು ಗ್ರಾಮೀಣರು, ಗುಡ್ಡಗಾಡು ಪ್ರದೇಶ ಗಳಿಗೂ ತಲುಪಿಸಲು ಸಾಧ್ಯವಾಗಿದೆ ಎಂದರು.</p>.<p>ಜಿಲ್ಲೆಯು ಶೇ 40 ರಿಂದ 50ರಷ್ಟು ಅರಣ್ಯ ಪ್ರದೇಶದಿಂದ ಕೂಡಿದ್ದು, ಕಾಡಂಚಿನ ಪ್ರದೇಶಗಳಾದ ಬೇಡಗುಳಿ, ಗೋಪಿನಾಥಂ ಸೇರಿದಂತೆ ಇತರೆ ಪ್ರದೇಶದಲ್ಲಿ ಕಾರ್ಯಕರ್ತೆಯರು ಇಲ್ಲ. ಹಾಗಾಗಿ, ಈ ಪ್ರದೇಶದಲ್ಲಿ ಕಡಿಮೆ ವಿದ್ಯಾರ್ಹತೆ ಇದ್ದವರಿಗೂ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.</p>.<p>ಎಐಟಿಯುಸಿ ರಾಜ್ಯ ಕಾರ್ಯ ದರ್ಶಿ ಡಿ. ನಾಗಲಕ್ಷ್ಮಿ ಮಾತನಾಡಿ, ಆಶಾ ಕಾರ್ಯಕರ್ತೆಯರ ವೇತನ ನಿಗದಿಪಡಿಸಬೇಕು ಎಂದು 2017ರ ಸೆ. 7 ಮತ್ತು 8ರಂದು ಬೆಂಗಳೂರಿನಲ್ಲಿ ನಡೆಸಿದ ಹೋರಾಟದ ಯಶಸ್ಸಿಗೆ ಕಾರಣರಾದ ಕಾರ್ಯಕರ್ತೆಯರನ್ನು ಅಭಿನಂದಿಸುವ ಉದ್ದೇಶದಿಂದ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರದಲ್ಲಿ ಸಮಾವೇಶ ನಡೆಸಲಾಗುತ್ತಿದೆ ಎಂದು ತಿಳಿಸಿದರು.</p>.<p>ರಾಜ್ಯ ಸರ್ಕಾರದ ನಮ್ಮ ಹೋರಾಟಕ್ಕೆ ಸ್ಪಂದಿಸಿ ವೇತನ ನಿಗದಿಪಡಿಸಿರುವುದು ಶ್ಲಾಘನೀಯ. ಮುಂದಿನ ರಾಜ್ಯ ಬಜೆಟ್ನಲ್ಲಿ ವೇತನವನ್ನು ₹ 6,000 ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮನವಿ ಮಾಡಿದರು. ಸಮಾವೇಶದಲ್ಲಿ ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಎಂ.ಶಶಿಧರ್, ಜಿಲ್ಲಾ ಸಂಚಾಲಕ ಚಂದ್ರಶೇಖರ್ ಮೇಟಿ, ಜಿಲ್ಲಾ ಘಟಕದ ಅಧ್ಯಕ್ಷೆ ಕವಿತಾ ಹಾಜರಿದ್ದರು.</p>.<p>* * </p>.<p>ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಸಮಾಲೋಚನೆ ನಡೆಸಲಾಗುವುದು <strong>ಡಾ.ಎಂ.ಸಿ.ಮೋಹನಕುಮಾರಿ</strong><br /> ಜಿಲ್ಲಾ ಉಸ್ತುವಾರಿ ಸಚಿವೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>