‘ಮಂಗಳೂರಿನ ಆಕಾಶಭವನದ ಜನರಿಗೆ ಬಶೀರ್ ಎಂದರೆ ತುಂಬಾ ಪ್ರೀತಿ. ಬಶೀರ್ ತನ್ನೂರಿನ ಪರೋಪಕಾರಿ. ಹಿಂದೂ, ಮುಸ್ಲಿಮ್ ಎನ್ನದೆ ಎಲ್ಲರೊಂದಿಗೆ ಬೆರೆಯುವವರು. ಸೌದಿಯಲ್ಲಿದ್ದಾಗ ಪ್ರಭಾಕರ್ ಮತ್ತು ಬಶೀರ್ ಒಂದೇ ತಟ್ಟೆಯಲ್ಲಿ ಉಂಡವರು. ಪ್ರಭಾಕರ್ ಕುಟುಂಬ ಊರಲ್ಲಿ ಸಂಕಷ್ಟದಲ್ಲಿದ್ದಾಗ ಅವರ ತಾಯಿ ಚಿಕಿತ್ಸೆಗೆ ಬಶೀರ್ ಎಷ್ಟೋ ಬಾರಿ ಆರ್ಥಿಕ ಸಹಾಯ ಚಾಚಿದ್ದಾರೆ. ಧರ್ಮ, ಜಾತಿ ನೋಡದೆ ಯಾರೇ ಸಹಾಯ ಯಾಚಿಸಿದರೂ ಬಶೀರ್ ಇಲ್ಲ ಎಂದವರಲ್ಲ. ಧರ್ಮ ಮೀರಿ ನಿಂತ ಈ ಹಸನ್ಮುಖಿ ಬಶೀರ್ಗೆ ಎಂಥಾ ಶಿಕ್ಷೆ?’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.