ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೀಪಕ್ ರಾವ್, ಬಶೀರ್ ಮನೆಗೆ ಭೇಟಿ; ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಸಿಎಂ

Last Updated 7 ಜನವರಿ 2018, 17:30 IST
ಅಕ್ಷರ ಗಾತ್ರ

ಮಂಗಳೂರು: ಇತ್ತೀಚಿಗೆ ಕೊಲೆಯಾದ ಕಾಟಿಪಳ್ಳದ ದೀಪಕ್ ರಾವ್ ಹಾಗೂ ಹಲ್ಲೆಯಿಂದ ಸಾವಿಗೀಡಾಗಿರುವ ಅಹಮ್ಮದ್‌ ಬಶೀರ್ ಅವರ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ, ಮೃತನ ತಾಯಿ, ತಮ್ಮ ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ದೀಪಕ್ ತಮ್ಮ ಸತೀಶ್ ರಾವ್ ಅವರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ ಸಿಎಂ, ಈ ಸಂಬಂಧ ಪ್ರಕ್ರಿಯೆ ಆರಂಭಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ಸೂಚಿಸಿದರು. ಕೊಲೆಯಲ್ಲಿ ಭಾಗಿಯಾದ ಎಲ್ಲರ ವಿರುದ್ಧ ಕಠಿಣ ಕ್ರಮ ಜರುಗಿಸುವ ಭರವಸೆ ನೀಡಿದರು.

ದೀಪಕ್ ಕೊಲೆ ಬಳಿಕ ನಡೆದ ಹಲ್ಲೆಯಿಂದ ಸಾವಿಗೀಡಾಗಿರುವ ಅಹಮ್ಮದ್ ಬಶೀರ್ ಮನೆಗೂ ಮುಖ್ಯಮಂತ್ರಿ ಬೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಸಚಿವ ಯು.ಟಿ. ಖಾದರ್, ವಿಧಾನ ಪರಿಷತ್‌ನಲ್ಲಿ ಸರ್ಕಾರದ ಮುಖ್ಯ ಸಚೇತಕ ಐವನ್ ಡಿಸೋಜ, ಶಾಸಕ ಬಿ.ಎ.ಮೊಯಿದ್ದೀನ್ ಬಾವ ಜೊತೆಗಿದ್ದಾರೆ.

ಅಹಮ್ಮದ್ ಬಶೀರ್ ಮನೆಗೆ ಮುಖ್ಯಮಂತ್ರಿ ಭೇಟಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT