ಇಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕುರುಬ, ಗೊಂಡ, ಕಾಡುಕುರುಬರ ಜನಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ‘ಕುರುಬ ಸಮಾಜಕ್ಕೆ ಎಲ್ಲ ಪಕ್ಷಗಳು ರಾಜಕೀಯ ಪ್ರಾತಿನಿಧ್ಯ ನೀಡಿಲ್ಲ. ಮತಕ್ಕಾಗಿ ಬಳಸಿಕೊಂಡು ನಿರ್ಲಕ್ಷ್ಯ ಮಾಡುತ್ತಿವೆ. ಹೀಗಾಗಿ ಕುರುಬರ ಸಂಖ್ಯೆ ಹೆಚ್ಚಾಗಿರುವ ಕ್ಷೇತ್ರಗಳಲ್ಲಿ ಟಿಕೆಟ್ ನೀಡಬೇಕು. ಇಲ್ಲದಿದ್ದರೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು’ ಎಂದರು.