<p><strong>ಚಿತ್ರದುರ್ಗ:</strong> ‘ಇಲ್ಲಿನ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ’ ಎಂದು ಚಿತ್ರನಟಿ, ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಭಾವನಾ ಹೇಳಿದರು.</p>.<p>‘ತಾಯಿ ಬೇರು ಚಿತ್ರದುರ್ಗ. ನಾನೂ ನಗರದ ಬುರುಜನಹಟ್ಟಿಯ ಹುಡುಗಿ. ಇಲ್ಲಿಯವಳೇ ಆಗಿರುವುದರಿಂದ ಕೋಟೆ ನಾಡಿನಿಂದಲೇ ಸ್ಪರ್ಧಿಸಬೇಕು ಎಂದು ಇಲ್ಲಿಗೆ ಬಂದಿದ್ದೇನೆ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುವ ಮೂಲಕ ಪಕ್ಷ ಸಂಘಟಿಸಲು ಶ್ರಮಿಸುತ್ತೇನೆ. ನಾನು ಚಿತ್ರನಟಿಯಾಗಿರಲಿ, ಏನೇ ಆಗಿರಲಿ; ಅದು ಈವರೆಗಿನ ಪ್ರಾಮಾಣಿಕ ಪ್ರಯತ್ನದಿಂದ ಆಗಿರುವುದು. ಬದುಕು ಕಟ್ಟಿಕೊಳ್ಳಲು ಸುಳ್ಳು ಹೇಳಿಕೊಂಡು ಓಡಾಡುವ ಜಾಯಮಾನದವಳಲ್ಲ’ ಎಂದು ಹೇಳಿದರು.</p>.<p>‘ಹಿರಿಯರ ಮಾರ್ಗದರ್ಶನದಂತೆ ನಡೆದುಕೊಳ್ಳುವ ಪರಂಪರೆ ಕಾಂಗ್ರೆಸ್ನಲ್ಲಿದೆ. ಕೆಪಿಸಿಸಿ ಮುಖಂಡರು, ಕಾರ್ಯಕರ್ತರು, ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನ ಪಡೆದ ನಂತರ ಮುಂದಿನ ಹೆಜ್ಜೆ ಇಡುತ್ತೇನೆ’ ಎಂದರು.</p>.<p>ಒಂದು ರಾಜಕೀಯ ಪಕ್ಷ ಪರಿಪೂರ್ಣ ಆಗಬೇಕಾದರೆ ಮಹಿಳೆಯರಿಗೂ ಸಮಪಾಲು ನೀಡಬೇಕು. ಪುರುಷರಿಗೆ ಸಿಗುವಷ್ಟೇ ಮಹಿಳೆಯರಿಗೂ ಅವಕಾಶ ದೊರಕಬೇಕು ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ‘ಇಲ್ಲಿನ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ’ ಎಂದು ಚಿತ್ರನಟಿ, ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಭಾವನಾ ಹೇಳಿದರು.</p>.<p>‘ತಾಯಿ ಬೇರು ಚಿತ್ರದುರ್ಗ. ನಾನೂ ನಗರದ ಬುರುಜನಹಟ್ಟಿಯ ಹುಡುಗಿ. ಇಲ್ಲಿಯವಳೇ ಆಗಿರುವುದರಿಂದ ಕೋಟೆ ನಾಡಿನಿಂದಲೇ ಸ್ಪರ್ಧಿಸಬೇಕು ಎಂದು ಇಲ್ಲಿಗೆ ಬಂದಿದ್ದೇನೆ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುವ ಮೂಲಕ ಪಕ್ಷ ಸಂಘಟಿಸಲು ಶ್ರಮಿಸುತ್ತೇನೆ. ನಾನು ಚಿತ್ರನಟಿಯಾಗಿರಲಿ, ಏನೇ ಆಗಿರಲಿ; ಅದು ಈವರೆಗಿನ ಪ್ರಾಮಾಣಿಕ ಪ್ರಯತ್ನದಿಂದ ಆಗಿರುವುದು. ಬದುಕು ಕಟ್ಟಿಕೊಳ್ಳಲು ಸುಳ್ಳು ಹೇಳಿಕೊಂಡು ಓಡಾಡುವ ಜಾಯಮಾನದವಳಲ್ಲ’ ಎಂದು ಹೇಳಿದರು.</p>.<p>‘ಹಿರಿಯರ ಮಾರ್ಗದರ್ಶನದಂತೆ ನಡೆದುಕೊಳ್ಳುವ ಪರಂಪರೆ ಕಾಂಗ್ರೆಸ್ನಲ್ಲಿದೆ. ಕೆಪಿಸಿಸಿ ಮುಖಂಡರು, ಕಾರ್ಯಕರ್ತರು, ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನ ಪಡೆದ ನಂತರ ಮುಂದಿನ ಹೆಜ್ಜೆ ಇಡುತ್ತೇನೆ’ ಎಂದರು.</p>.<p>ಒಂದು ರಾಜಕೀಯ ಪಕ್ಷ ಪರಿಪೂರ್ಣ ಆಗಬೇಕಾದರೆ ಮಹಿಳೆಯರಿಗೂ ಸಮಪಾಲು ನೀಡಬೇಕು. ಪುರುಷರಿಗೆ ಸಿಗುವಷ್ಟೇ ಮಹಿಳೆಯರಿಗೂ ಅವಕಾಶ ದೊರಕಬೇಕು ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>