ಬೆಂಗಳೂರು: ಏಟಿಗೆ– ಎದಿರೇಟು ಮತ್ತು ಕಣ್ಣಿಗೆ ಕಣ್ಣು ಎಂದು ಹೊರಟರೆ ಜಗತ್ತೇ ಕತ್ತಲಿನಲ್ಲಿ ಮುಳುಗುತ್ತದೆ ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.
ದೀಪಕ್ ಹತ್ಯೆಗೆ ಬಷೀರ್ ಹತ್ಯೆ ಉತ್ತರವಲ್ಲ. ಈ ಸಂದರ್ಭದಲ್ಲಿ ಹಿಂದು ಮತ್ತು ಮುಸ್ಲಿಂ ಧರ್ಮೀಯರು ಒಗ್ಗೂಡಿ ಶಾಂತಿ ಸಭೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು. ರಾಜ್ಯದಲ್ಲಿ ಶಾಂತಿ ಕಾಪಾಡಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸುತ್ತಿಲ್ಲ. ಆ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ಅವರು ಹೇಳಿದ್ದಾರೆ.