<p><strong>ಶಿರಸಿ:</strong> ನಾಡಗೀತೆಗೆ ನಿರ್ದಿಷ್ಟ ಧಾಟಿಯನ್ನು ತಕ್ಷಣವೇ ನಿಗದಿ ಮಾಡಬೇಕು ಎಂದು ಭಾನುವಾರ ಇಲ್ಲಿ ಮುಕ್ತಾಯಗೊಂಡ ರಾಜ್ಯಮಟ್ಟದ ಸುಗಮ ಸಂಗೀತ ಸಮ್ಮೇಳನ ಒತ್ತಾಯಿಸಿದೆ. ಇಲ್ಲದಿದ್ದಲ್ಲಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿಯೂ ಎಚ್ಚರಿಸಿದೆ.</p>.<p>ಕರ್ನಾಟಕ ಸುಗಮ ಸಂಗೀತ ಪರಿಷತ್ತಿಗೆ ಬೆಂಗಳೂರಿನಲ್ಲಿ ಶಾಶ್ವತ ನಿವೇಶನ ನೀಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಸುಗಮ ಸಂಗೀತಕ್ಕೆ ಪ್ರತ್ಯೇಕ ಅಕಾಡೆಮಿ ಸ್ಥಾಪನೆ ಮಾಡಬೇಕು. ಈ ಕಾರ್ಯ ಇದೇ ವರ್ಷ ಆಗಬೇಕು. ಸುಗಮ ಸಂಗೀತವನ್ನು ಪಠ್ಯಕ್ರಮದಲ್ಲಿ ಸೇರಿಸಬೇಕು ಎಂದೂ ಸಮ್ಮೇಳನ ಆಗ್ರಹಿಸಿದೆ.</p>.<p>ಸಮಾರೋಪ ಕಾರ್ಯಕ್ರಮದಲ್ಲಿ ಪರಿಷತ್ ಗೌರವಾಧ್ಯಕ್ಷ ವೈ.ಕೆ. ಮುದ್ದುಕೃಷ್ಣ ನಿರ್ಣಯ ಮಂಡಿಸಿದರು.<br /> ಸಮ್ಮೇಳನದ ಅಧ್ಯಕ್ಷೆ ಎಂ.ಕೆ. ಜಯಶ್ರೀ, ಸಾಹಿತಿ ಸಿದ್ಧಲಿಂಗ ಪಟ್ಟಣಶೆಟ್ಟಿ, ಕವಿ ಸುಬ್ರಾಯ ಚೊಕ್ಕಾಡಿ, ಸುಗಮ ಸಂಗೀತ ಪರಿಷತ್ ಅಧ್ಯಕ್ಷ ಕಿಕ್ಕೇರಿ ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ನಗರ ಶ್ರೀನಿವಾಸ ಉಡುಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ನಾಡಗೀತೆಗೆ ನಿರ್ದಿಷ್ಟ ಧಾಟಿಯನ್ನು ತಕ್ಷಣವೇ ನಿಗದಿ ಮಾಡಬೇಕು ಎಂದು ಭಾನುವಾರ ಇಲ್ಲಿ ಮುಕ್ತಾಯಗೊಂಡ ರಾಜ್ಯಮಟ್ಟದ ಸುಗಮ ಸಂಗೀತ ಸಮ್ಮೇಳನ ಒತ್ತಾಯಿಸಿದೆ. ಇಲ್ಲದಿದ್ದಲ್ಲಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿಯೂ ಎಚ್ಚರಿಸಿದೆ.</p>.<p>ಕರ್ನಾಟಕ ಸುಗಮ ಸಂಗೀತ ಪರಿಷತ್ತಿಗೆ ಬೆಂಗಳೂರಿನಲ್ಲಿ ಶಾಶ್ವತ ನಿವೇಶನ ನೀಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಸುಗಮ ಸಂಗೀತಕ್ಕೆ ಪ್ರತ್ಯೇಕ ಅಕಾಡೆಮಿ ಸ್ಥಾಪನೆ ಮಾಡಬೇಕು. ಈ ಕಾರ್ಯ ಇದೇ ವರ್ಷ ಆಗಬೇಕು. ಸುಗಮ ಸಂಗೀತವನ್ನು ಪಠ್ಯಕ್ರಮದಲ್ಲಿ ಸೇರಿಸಬೇಕು ಎಂದೂ ಸಮ್ಮೇಳನ ಆಗ್ರಹಿಸಿದೆ.</p>.<p>ಸಮಾರೋಪ ಕಾರ್ಯಕ್ರಮದಲ್ಲಿ ಪರಿಷತ್ ಗೌರವಾಧ್ಯಕ್ಷ ವೈ.ಕೆ. ಮುದ್ದುಕೃಷ್ಣ ನಿರ್ಣಯ ಮಂಡಿಸಿದರು.<br /> ಸಮ್ಮೇಳನದ ಅಧ್ಯಕ್ಷೆ ಎಂ.ಕೆ. ಜಯಶ್ರೀ, ಸಾಹಿತಿ ಸಿದ್ಧಲಿಂಗ ಪಟ್ಟಣಶೆಟ್ಟಿ, ಕವಿ ಸುಬ್ರಾಯ ಚೊಕ್ಕಾಡಿ, ಸುಗಮ ಸಂಗೀತ ಪರಿಷತ್ ಅಧ್ಯಕ್ಷ ಕಿಕ್ಕೇರಿ ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ನಗರ ಶ್ರೀನಿವಾಸ ಉಡುಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>