<p><strong>ಮೈಸೂರು: </strong>‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಹೆಣ ಹೊರಲು ಬಿಜೆಪಿಯ ನಾಲ್ವರು ನಾಯಕರು ಸಿದ್ಧರಾಗುತ್ತಿದ್ದಾರೆ. ಅವರೇ ಶೋಭಾ ಕರಂದ್ಲಾಜೆ, ಅನಂತಕುಮಾರ ಹೆಗಡೆ, ಪ್ರತಾಪ ಸಿಂಹ ಹಾಗೂ ಸಿ.ಟಿ.ರವಿ’ ಎಂದು ಸಿಪಿಐ ರಾಷ್ಟ್ರೀಯ ಮಂಡಳಿ ಸದಸ್ಯ ಸಿದ್ದನಗೌಡ ಪಾಟೀಲ ವ್ಯಂಗ್ಯವಾಡಿದರು.</p>.<p>ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಸಿಪಿಐ 12ನೇ ಜಿಲ್ಲಾ ಸಮ್ಮೇಳ ನವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಈ ನಾಲ್ವರು ಬಾಯಿಗೆ ಬಂದ ಹಾಗೆ ಮಾತನಾಡುವುದರಲ್ಲಿ ತುಂಬಾ ನಿಸ್ಸೀಮರು. ಒಬ್ಬರು ಸಂವಿಧಾನ ಬದಲಿಸುತ್ತೇವೆ ಎಂದು ಹೇಳುತ್ತಾರೆ. ಜಾತ್ಯತೀತರ ಬಗ್ಗೆ ತುಂಬಾ ಕೀಳಾಗಿ ಮಾತನಾಡುತ್ತಾರೆ. ಇನ್ನುಳಿದವರು ಟಿಪ್ಪು ಜಯಂತಿ ಬೇಡ ಎಂದು ಎಲ್ಲೆಡೆ ಕೂಗಾಡುತ್ತಾರೆ. ನಾನು ಈ ಕುರಿತು ಯಡಿಯೂರಪ್ಪ ಅವರಿಗೆ ಸಲಹೆ ಕೊಡಬೇಕೆಂದಿದ್ದೇನೆ. ಬಾಯಿಗೆ ಬೀಗ ಹಾಕಿಕೊಳ್ಳುವಂತೆ ಈ ನಾಲ್ವರಿಗೆ ಈಗಲೇ ಎಚ್ಚರಿಕೆ ನೀಡಬೇಕು. ಇಲ್ಲದಿದ್ದರೆ ಅವರೇ ಯಡಿಯೂರಪ್ಪ ಅವರ ಹೆಣ ಹೊರುತ್ತಾರೆ’ ಎಂದು ಹೇಳಿದರು.</p>.<p>ಜನಸಾಮಾನ್ಯರಿಗೆ ಅನುಕೂಲ ವಾಗುವ ಒಂದೂ ಮಾತನ್ನು ಇವರು ಆಡುವುದಿಲ್ಲ. ದೇಶದಲ್ಲಿ ಕಾರ್ಮಿಕರು, ಕೃಷಿಕರ ಮೇಲೆ ದಬ್ಬಾಳಿಕೆಯಾಗುತ್ತಿದೆ. ಜನಸಾಮಾನ್ಯರ ಹಣವನ್ನು ಉದ್ಯಮಿಗಳಿಗೆ ಹಂಚಲಾಗುತ್ತಿದೆ. ಇದನ್ನು ಪ್ರಶ್ನಿಸಲು ಈ ನಾಲ್ವರಿಗೆ ಮಾತು ಬರುವುದಿಲ್ಲ. ಬಾಯಿ ಬಿಟ್ಟರೆ ಕೋಮು ಸೌಹಾರ್ದ ಕೆಡಿಸುವ ಮಾತನ್ನಾಡುತ್ತಾರೆ.</p>.<p>ಈ ರೀತಿಯ ಮಾತುಗಳು ಅವರಿಗೇ ಮುಳುವಾಗುವುದರಲ್ಲಿ ಸಂದೇಹವಿಲ್ಲ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಹೆಣ ಹೊರಲು ಬಿಜೆಪಿಯ ನಾಲ್ವರು ನಾಯಕರು ಸಿದ್ಧರಾಗುತ್ತಿದ್ದಾರೆ. ಅವರೇ ಶೋಭಾ ಕರಂದ್ಲಾಜೆ, ಅನಂತಕುಮಾರ ಹೆಗಡೆ, ಪ್ರತಾಪ ಸಿಂಹ ಹಾಗೂ ಸಿ.ಟಿ.ರವಿ’ ಎಂದು ಸಿಪಿಐ ರಾಷ್ಟ್ರೀಯ ಮಂಡಳಿ ಸದಸ್ಯ ಸಿದ್ದನಗೌಡ ಪಾಟೀಲ ವ್ಯಂಗ್ಯವಾಡಿದರು.</p>.<p>ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಸಿಪಿಐ 12ನೇ ಜಿಲ್ಲಾ ಸಮ್ಮೇಳ ನವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಈ ನಾಲ್ವರು ಬಾಯಿಗೆ ಬಂದ ಹಾಗೆ ಮಾತನಾಡುವುದರಲ್ಲಿ ತುಂಬಾ ನಿಸ್ಸೀಮರು. ಒಬ್ಬರು ಸಂವಿಧಾನ ಬದಲಿಸುತ್ತೇವೆ ಎಂದು ಹೇಳುತ್ತಾರೆ. ಜಾತ್ಯತೀತರ ಬಗ್ಗೆ ತುಂಬಾ ಕೀಳಾಗಿ ಮಾತನಾಡುತ್ತಾರೆ. ಇನ್ನುಳಿದವರು ಟಿಪ್ಪು ಜಯಂತಿ ಬೇಡ ಎಂದು ಎಲ್ಲೆಡೆ ಕೂಗಾಡುತ್ತಾರೆ. ನಾನು ಈ ಕುರಿತು ಯಡಿಯೂರಪ್ಪ ಅವರಿಗೆ ಸಲಹೆ ಕೊಡಬೇಕೆಂದಿದ್ದೇನೆ. ಬಾಯಿಗೆ ಬೀಗ ಹಾಕಿಕೊಳ್ಳುವಂತೆ ಈ ನಾಲ್ವರಿಗೆ ಈಗಲೇ ಎಚ್ಚರಿಕೆ ನೀಡಬೇಕು. ಇಲ್ಲದಿದ್ದರೆ ಅವರೇ ಯಡಿಯೂರಪ್ಪ ಅವರ ಹೆಣ ಹೊರುತ್ತಾರೆ’ ಎಂದು ಹೇಳಿದರು.</p>.<p>ಜನಸಾಮಾನ್ಯರಿಗೆ ಅನುಕೂಲ ವಾಗುವ ಒಂದೂ ಮಾತನ್ನು ಇವರು ಆಡುವುದಿಲ್ಲ. ದೇಶದಲ್ಲಿ ಕಾರ್ಮಿಕರು, ಕೃಷಿಕರ ಮೇಲೆ ದಬ್ಬಾಳಿಕೆಯಾಗುತ್ತಿದೆ. ಜನಸಾಮಾನ್ಯರ ಹಣವನ್ನು ಉದ್ಯಮಿಗಳಿಗೆ ಹಂಚಲಾಗುತ್ತಿದೆ. ಇದನ್ನು ಪ್ರಶ್ನಿಸಲು ಈ ನಾಲ್ವರಿಗೆ ಮಾತು ಬರುವುದಿಲ್ಲ. ಬಾಯಿ ಬಿಟ್ಟರೆ ಕೋಮು ಸೌಹಾರ್ದ ಕೆಡಿಸುವ ಮಾತನ್ನಾಡುತ್ತಾರೆ.</p>.<p>ಈ ರೀತಿಯ ಮಾತುಗಳು ಅವರಿಗೇ ಮುಳುವಾಗುವುದರಲ್ಲಿ ಸಂದೇಹವಿಲ್ಲ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>