ನವದೆಹಲಿ: ಆರ್ಎಸ್ಎಸ್ ಮುಖ್ಯಸ್ಥ ಮೋಹನ ಭಾಗವತ್ ಕೇರಳದ ಪಾಲಕ್ಕಾಡ್ ಪಟ್ಟಣದ ಹೊರವಲಯದ ಶಾಲೆಯೊಂದರಲ್ಲಿ ಗಣರಾಜ್ಯೋತ್ಸವ ದಿನದಂದು ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ. ಎಡರಂಗದ ಸರ್ಕಾರ ಇರುವ ಕೇರಳದಲ್ಲಿ ಕಳೆದ ಸ್ವಾತಂತ್ರ್ಯೋತ್ಸವ ದಿನದಂದು ಭಾಗವತ್ ಧ್ವಜಾರೋಹಣ ಮಾಡಿದ್ದು ಆರ್ಎಸ್ಎಸ್ ಮತ್ತು ಎಡಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು.