<p><strong>ನವದೆಹಲಿ: </strong>ಆರ್ಎಸ್ಎಸ್ ಮುಖ್ಯಸ್ಥ ಮೋಹನ ಭಾಗವತ್ ಕೇರಳದ ಪಾಲಕ್ಕಾಡ್ ಪಟ್ಟಣದ ಹೊರವಲಯದ ಶಾಲೆಯೊಂದರಲ್ಲಿ ಗಣರಾಜ್ಯೋತ್ಸವ ದಿನದಂದು ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ. ಎಡರಂಗದ ಸರ್ಕಾರ ಇರುವ ಕೇರಳದಲ್ಲಿ ಕಳೆದ ಸ್ವಾತಂತ್ರ್ಯೋತ್ಸವ ದಿನದಂದು ಭಾಗವತ್ ಧ್ವಜಾರೋಹಣ ಮಾಡಿದ್ದು ಆರ್ಎಸ್ಎಸ್ ಮತ್ತು ಎಡಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು.</p>.<p>ಇದೇ 26ರಿಂದ ಪಾಲಕ್ಕಾಡ್ ಹೊರವಲಯದ ಶಾಲೆಯೊಂದರ ಸಮೀಪ ಆರ್ಎಸ್ಎಸ್ನ ಮೂರು ದಿನಗಳ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ ಭಾಗವತ್ ಭಾಗವಹಿಸಲಿದ್ದಾರೆ.</p>.<p>‘ಸ್ವಾತಂತ್ರ್ಯ ಮತ್ತು ಗಣರಾಜ್ಯೋತ್ಸವ ದಿನದಂದು ಆರ್ಎಸ್ಎಸ್ ಮುಖ್ಯಸ್ಥರು ಎಲ್ಲಿ ಇರುತ್ತಾರೋ ಅಲ್ಲಿಯೇ ಧ್ವಜಾರೋಹಣ ಮಾಡುತ್ತಾರೆ. ಇದೇ 26ರಂದು ಭಾಗವತ್ ಕೇರಳದಲ್ಲಿರುತ್ತಾರೆ. ಹಾಗಾಗಿ ಅವರು ಅಲ್ಲಿಯೇ ಧ್ವಜಾರೋಹಣ ಮಾಡಲಿದ್ದಾರೆ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ’ ಎಂದು ಆರ್ಎಸ್ಎಸ್ನ ಪದಾಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>ಆರ್ಎಸ್ಎಸ್ ಕಾರ್ಯಕ್ರಮ ನಡೆಯುವ ಶಾಲೆಯು ಆರ್ಎಸ್ಎಸ್ನ ಭಾರತೀಯ ವಿದ್ಯಾ ನಿಕೇತನ ಸಂಸ್ಥೆಯ ಅಧೀನದಲ್ಲಿದೆ. ಆರ್ಎಸ್ಎಸ್ ರಾಷ್ಟ್ರೀಯವಾದಿ ಸಂಘಟನೆ ಆಗಿರುವುದರಿಂದ ರಾಷ್ಟ್ರೀಯ ಮಹತ್ವದ ದಿನಗಳನ್ನು ಆಚರಿಸುವುದು ಸಂಘಟನೆಯ ಸಂಸ್ಕೃತಿಯೇ ಆಗಿದೆ ಎಂದು ಅವರು ಹೇಳಿದ್ದಾರೆ.</p>.<p>ಕಳೆದ ಆಗಸ್ಟ್ 15ರಂದು ಜಿಲ್ಲಾಧಿಕಾರಿಯ ಆದೇಶವನ್ನು ಉಲ್ಲಂಘಿಸಿ ಪಾಲಕ್ಕಾಡ್ನ ಶಾಲೆಯೊಂದರಲ್ಲಿ ಭಾಗವತ್ ಧ್ವಜಾರೋಹಣ ಮಾಡಿದ್ದರು. ಕೇರಳದಲ್ಲಿ ಆರ್ಎಸ್ಎಸ್ ಗಣನೀಯ ಪ್ರಾಬಲ್ಯ ಹೊಂದಿದೆ. ಆರ್ಎಸ್ಎಸ್ ಮತ್ತು ಸಿಪಿಎಂ ಕಾರ್ಯಕರ್ತರ ನಡುವೆ ಅಲ್ಲಿ ಆಗಾಗ ಸಂಘರ್ಷವೂ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಆರ್ಎಸ್ಎಸ್ ಮುಖ್ಯಸ್ಥ ಮೋಹನ ಭಾಗವತ್ ಕೇರಳದ ಪಾಲಕ್ಕಾಡ್ ಪಟ್ಟಣದ ಹೊರವಲಯದ ಶಾಲೆಯೊಂದರಲ್ಲಿ ಗಣರಾಜ್ಯೋತ್ಸವ ದಿನದಂದು ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ. ಎಡರಂಗದ ಸರ್ಕಾರ ಇರುವ ಕೇರಳದಲ್ಲಿ ಕಳೆದ ಸ್ವಾತಂತ್ರ್ಯೋತ್ಸವ ದಿನದಂದು ಭಾಗವತ್ ಧ್ವಜಾರೋಹಣ ಮಾಡಿದ್ದು ಆರ್ಎಸ್ಎಸ್ ಮತ್ತು ಎಡಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು.</p>.<p>ಇದೇ 26ರಿಂದ ಪಾಲಕ್ಕಾಡ್ ಹೊರವಲಯದ ಶಾಲೆಯೊಂದರ ಸಮೀಪ ಆರ್ಎಸ್ಎಸ್ನ ಮೂರು ದಿನಗಳ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ ಭಾಗವತ್ ಭಾಗವಹಿಸಲಿದ್ದಾರೆ.</p>.<p>‘ಸ್ವಾತಂತ್ರ್ಯ ಮತ್ತು ಗಣರಾಜ್ಯೋತ್ಸವ ದಿನದಂದು ಆರ್ಎಸ್ಎಸ್ ಮುಖ್ಯಸ್ಥರು ಎಲ್ಲಿ ಇರುತ್ತಾರೋ ಅಲ್ಲಿಯೇ ಧ್ವಜಾರೋಹಣ ಮಾಡುತ್ತಾರೆ. ಇದೇ 26ರಂದು ಭಾಗವತ್ ಕೇರಳದಲ್ಲಿರುತ್ತಾರೆ. ಹಾಗಾಗಿ ಅವರು ಅಲ್ಲಿಯೇ ಧ್ವಜಾರೋಹಣ ಮಾಡಲಿದ್ದಾರೆ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ’ ಎಂದು ಆರ್ಎಸ್ಎಸ್ನ ಪದಾಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>ಆರ್ಎಸ್ಎಸ್ ಕಾರ್ಯಕ್ರಮ ನಡೆಯುವ ಶಾಲೆಯು ಆರ್ಎಸ್ಎಸ್ನ ಭಾರತೀಯ ವಿದ್ಯಾ ನಿಕೇತನ ಸಂಸ್ಥೆಯ ಅಧೀನದಲ್ಲಿದೆ. ಆರ್ಎಸ್ಎಸ್ ರಾಷ್ಟ್ರೀಯವಾದಿ ಸಂಘಟನೆ ಆಗಿರುವುದರಿಂದ ರಾಷ್ಟ್ರೀಯ ಮಹತ್ವದ ದಿನಗಳನ್ನು ಆಚರಿಸುವುದು ಸಂಘಟನೆಯ ಸಂಸ್ಕೃತಿಯೇ ಆಗಿದೆ ಎಂದು ಅವರು ಹೇಳಿದ್ದಾರೆ.</p>.<p>ಕಳೆದ ಆಗಸ್ಟ್ 15ರಂದು ಜಿಲ್ಲಾಧಿಕಾರಿಯ ಆದೇಶವನ್ನು ಉಲ್ಲಂಘಿಸಿ ಪಾಲಕ್ಕಾಡ್ನ ಶಾಲೆಯೊಂದರಲ್ಲಿ ಭಾಗವತ್ ಧ್ವಜಾರೋಹಣ ಮಾಡಿದ್ದರು. ಕೇರಳದಲ್ಲಿ ಆರ್ಎಸ್ಎಸ್ ಗಣನೀಯ ಪ್ರಾಬಲ್ಯ ಹೊಂದಿದೆ. ಆರ್ಎಸ್ಎಸ್ ಮತ್ತು ಸಿಪಿಎಂ ಕಾರ್ಯಕರ್ತರ ನಡುವೆ ಅಲ್ಲಿ ಆಗಾಗ ಸಂಘರ್ಷವೂ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>