ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬದುಕಿಗೆ ಬೇಕು ಸದ್ಗುಣ: ಯೇಸುದಾಸ್

Last Updated 7 ಜನವರಿ 2018, 19:46 IST
ಅಕ್ಷರ ಗಾತ್ರ

ಬೆಂಗಳೂರು: ಎಲ್ಲರನ್ನೂ ಗೌರವಿಸುವ ಮತ್ತು ಸಹಾಯ ಮಾಡುವ ಸದ್ಗುಣ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇದರಿಂದ ನೆಮ್ಮದಿಯೂ ಸಿಗುತ್ತದೆ ಎಂದು ಗಾಯಕ ಕೆ.ಜೆ. ಯೇಸುದಾಸ್ ತಿಳಿಸಿದರು.

ರೆವಾ ವಿಶ್ವವಿದ್ಯಾಲಯ ಸಂಸ್ಥಾಪನಾ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಎಲ್ಲ ಧರ್ಮಗಳನ್ನು ಗೌರವಿಸಬೇಕು. ವಿದ್ಯೆಯನ್ನು ಗೌರವದಿಂದ ಕಲಿತು, ಜೀವನ ಸಾರ್ಥಕಪಡಿಸಿಕೊಳ್ಳಬೇಕು. ನಿಮ್ಮ ಮೇಲೆ ನೀವು ವಿಶ್ವಾಸವಿಡ
ಬೇಕು’ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

‘ಎಲ್ಲರಲ್ಲೂ ಒಂದಲ್ಲ ಒಂದು ವಿಶೇಷ ಇರುತ್ತದೆ. ಆ ವಿಶೇಷತೆಯನ್ನು ನೀವು ಪ್ರಸ್ತುತಪಡಿಸುವಂತೆ ಜಗತ್ತು ಕಾತರದಿಂದ ಕಾಯುತ್ತಿದೆ’ ಎಂದು ನಟ ರಮೇಶ್‌ ತಿಳಿಸಿದರು.

ಕುಲಪತಿ ಡಾ. ಪಿ.ಶ್ಯಾಮರಾಜು, ‘ರೆವಾ ವಿಶ್ವವಿದ್ಯಾಲಯ ಮಾದರಿ
ಯಾಗುವ ಕೆಲಸಗಳನ್ನು ಮಾಡುತ್ತಿದೆ. ಇಲ್ಲಿನ ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ವಿಶ್ವಾಸವಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT