ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಬೆಂಕಿ ಅವಘಡ: ಐವರು ಸಜೀವ ದಹನ

Last Updated 8 ಜನವರಿ 2018, 3:14 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಕಲಾಸಿಪಾಳ್ಯ ಮಾರುಕಟ್ಟೆ ಪ್ರದೇಶದಲ್ಲಿರುವ ಕೈಲಾಸ್ ಬಾರ್ ಆ್ಯಂಡ್ ರೆಸ್ಟೊರಂಟ್‌ನಲ್ಲಿ ಸೋಮವಾರ ನಸುಕಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಐವರು ಸಜೀವವಾಗಿ ದಹನವಾಗಿದ್ದಾರೆ.

ತುಮಕೂರಿನ ಸ್ವಾಮಿ (23), ಪ್ರಸಾದ್ (20), ಹಾಸನದ ಮಂಜುನಾಥ್ (45), ಮಂಡ್ಯದ ಕೀರ್ತಿ (24) ಹಾಗೂ ಮಹೇಶ್ ( 35)  ಮೃತರು. ಇವರೆಲ್ಲ ಬಾರ್ ಆ್ಯಂಡ್ ರೆಸ್ಟೊರಂಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಭಾನುವಾರ ರಾತ್ರಿ ಕೆಲಸ ಮುಗಿಸಿ ಮಲಗಿದ್ದಾಗ ಈ ಅವಘಡ ಸಂಭವಿಸಿದೆ.

ಸದ್ಯಕ್ಕೆ ಘಟನೆಗೆ ಕಾರಣವೇನೆಂಬುದು ತಿಳಿದುಬಂದಿಲ್ಲ. ನಸುಕಿನಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಲಾಸಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT