ಮಂಗಳೂರು: ಇಲ್ಲಿನ ಉಳ್ಳಾಲ ಸಮೀಪದ ನಾಟೇಕಲ್ನಲ್ಲಿ ಸೋಮವಾರ ನಸುಕಿನಲ್ಲಿ ದುಷ್ಕರ್ಮಿಗಳು ಮಸೀದಿಯೊಂದಕ್ಕೆ ಕಲ್ಲು ತೂರಿದ್ದಾರೆ.
ಘಟನೆಯಲ್ಲಿ ಮಸೀದಿಯ ಕಿಟಕಿ ಗಾಜುಗಳು ಒಡೆದು ಹೋಗಿವೆ. ಸಮೀಪದ ಅಂಗಡಿಯೊಂದರ ಸಿಸಿಟಿವಿ ಕ್ಯಾಮೆರಾಗಳನ್ನೂ ಕದ್ದೊಯ್ದಿದ್ದಾರೆ. ಆರೋಪಿಗಳಿಗೆ ಸಂಬಂಧಿಸಿದ ಒಂದು ಬೈಕ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭವಾಗಿದೆ.