ಚಿತ್ರದುರ್ಗ: ಕ್ರೂಸರ್ ಮತ್ತು ಟ್ರಕ್ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ಚಿತ್ರದುರ್ಗ ಹೊರವಲಯದ ಸಿಬಾರ ಬಳಿ ಸೋಮವಾರ ಬೆಳಿಗ್ಗೆ 7.30ಕ್ಕೆ ನಡೆದಿದೆ. ಎಂಟು ಜನ ಗಾಯಗೊಂಡಿದ್ದಾರೆ.
ಸಿದ್ದಾರ್ಥ, ರಾಕೇಶ್, ಶಿವಲಿಂಗು, ವಿನೋದ್ ಹಾಗೂ ಕ್ರೂಸರ್ ಚಾಲಕ ಸುರೇಶ್ ಮೃತರು. ಇವರು ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಮುನ್ಯಾಳು ಗ್ರಾಮದವರಾಗಿದ್ದಾರೆ.
ಮೈಸೂರು ಪ್ರವಾಸ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮೃತರು ಸುಮಾರು 18ರಿಂದ 24ವರ್ಷದೊಳಗಿನವರಾಗಿದ್ದಾರೆ.
ಗಾಯಾಳುಗಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.